ಖಾಲಿ ಚೊಂಬಿಗೆ ಮತ ಹಾಕಿ ನಿಮ್ಮ ಮತದ ಘನತೆ ಕಳೆದುಕೊಳ್ಳುತ್ತೀರೋ? ಗ್ಯಾರಂಟಿಗಳಿಗೆ ಮತ ಹಾಕ್ತೀರೋ ನಿರ್ಧರಿಸಿ: ಸಿ.ಎಂ ಸಿದ್ಧರಾಮಯ್ಯ

ಚಿಕ್ಕಮಗಳೂರು: ವಾಜಪೇಯಿಯವರ ಇಂಡಿಯಾ ಶೈನಿಂಗ್ ಎನ್ನುವ ಸುಳ್ಳು ಪ್ರಚಾರ ಸೋತ ಹಾಗೆಯೇ ಮೋದಿಯವರ ವಿಕಸಿತ ಭಾರತ ಎನ್ನುವ ಸುಳ್ಳಿನ ಪ್ರಚಾರಕ್ಕೂ ಸೋಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಬೃಹತ್ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು. ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿಯವರು ಭಾರತೀಯರಿಗೆ ಸರಣಿ ಸುಳ್ಳುಗಳನ್ನು ನಂಬಿಸಿ ವಂಚಿಸಿದರು. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಎಂದು ನಂಬಿಸಿದರು. ಈಗ ನಂಬಿಕೆ ದ್ರೋಹ ಆಗಿದೆ. ವರ್ಷಕ್ಕೆ 2 ಕೋಟಿ ಉದ್ಯೋಗ … Continue reading ಖಾಲಿ ಚೊಂಬಿಗೆ ಮತ ಹಾಕಿ ನಿಮ್ಮ ಮತದ ಘನತೆ ಕಳೆದುಕೊಳ್ಳುತ್ತೀರೋ? ಗ್ಯಾರಂಟಿಗಳಿಗೆ ಮತ ಹಾಕ್ತೀರೋ ನಿರ್ಧರಿಸಿ: ಸಿ.ಎಂ ಸಿದ್ಧರಾಮಯ್ಯ