Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಫ್ರೆಶ್’ ಕಾಣಲು ಸೌತೆಕಾಯಿಗೆ ವಿಷಕಾರಿ ಬಣ್ಣದ ಸ್ನಾನ! ಹಸಿರು ಪೇಂಟ್ ಹಚ್ಚುತ್ತಿದ್ದ ಮಹಿಳೆ ಸೆರೆ: ವಿಡಿಯೋ ವೈರಲ್

BREAKING: ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಡೌಟ್ | TVK Chief Vijay

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತಿ ಗಣತಿ ವರದಿ ಹಿಂಪಡೆದು, ಪ್ರತಿ ಮನೆಗೆ ಹೋಗಿ ವೈಜ್ಞಾನಿಕ ಸಮೀಕ್ಷೆ ಮಾಡಿ: ಆರ್.ಅಶೋಕ್ ಆಗ್ರಹ
KARNATAKA

ಜಾತಿ ಗಣತಿ ವರದಿ ಹಿಂಪಡೆದು, ಪ್ರತಿ ಮನೆಗೆ ಹೋಗಿ ವೈಜ್ಞಾನಿಕ ಸಮೀಕ್ಷೆ ಮಾಡಿ: ಆರ್.ಅಶೋಕ್ ಆಗ್ರಹ

By kannadanewsnow09

ಬೆಂಗಳೂರು : ಕೇವಲ ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಮಾಡಿಸಿದ್ದಾರೆ. ಈ ವರದಿಯನ್ನು ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಹಾಗೂ ಧರ್ಮಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ. ಮೊದಲು ರಾಜ್ಯದಲ್ಲಿ ಅತಿ ದೊಡ್ಡ ಜಾತಿ ಲಿಂಗಾಯತರು, ಎರಡನೇ ಅತಿ ದೊಡ್ಡ ಜಾತಿ ಒಕ್ಕಲಿಗರು ಹಾಗೂ ಮೂರನೆಯವರು ದಲಿತರು ಎಂದಿತ್ತು. ಆದರೆ ಈಗ ಮುಸ್ಲಿಮರು ಅತಿ ದೊಡ್ಡ ಜಾತಿ ಎನ್ನಲಾಗಿದೆ. ಮುಸ್ಲಿಮರಲ್ಲೇ ವಿವಿಧ ಜಾತಿಗಳಿದ್ದು, ಅದನ್ನು ಬೇರೆ ಮಾಡಿಲ್ಲ. ಒಕ್ಕಲಿಗರಲ್ಲೇ ಕೆಲವು ಜಾತಿಗಳನ್ನು ವಿಂಗಡಣೆ ಮಾಡಿದ್ದಾರೆ. ಕಾಂಗ್ರೆಸ್ ಗೆ ಹೆಚ್ಚು ಮತ ನೀಡುವವರ ಸಂಖ್ಯೆಯನ್ನು ಹೆಚ್ಚಾಗಿ ತೋರಿಸಲಾಗಿದೆ. ಒಕ್ಕಲಿಗರಿಗೆ, ಲಿಂಗಾಯತರಿಗೆ, ದಲಿತರಿಗೆ ನಾಮ ಹಾಕಿದ್ದಾರೆ ಎಂದು ದೂರಿದರು.

ಸಿಎಂ ಸಿದ್ದರಾಮಯ್ಯ ಪಕ್ಷ, ಜಾತಿ, ಧರ್ಮ ಒಡೆಯುವುದರಲ್ಲಿ ನಂ.1 ಆಗಿದ್ದಾರೆ. ಸಿದ್ದರಾಮಯ್ಯ ಪ್ರಾಯೋಜಿತವಾದ ಈ ವರದಿ ಅವೈಜ್ಞಾನಿಕ. ಲಕ್ಷಾಂತರ ಜನರ ಮನೆಗೆ ಹೋಗದೆ ವರದಿ ಬರೆಯಲಾಗಿದೆ. ಕರ್ನಾಟಕ ತಂತ್ರಜ್ಞಾನದಲ್ಲೇ ನಂ.1 ಆಗಿದೆ. ಇದನ್ನು ಬಳಸಿಕೊಂಡು ವರದಿ ಮಾಡಬಹುದಿತ್ತು. ಆದರೂ ತಮಗೆ ಬೇಕಾದಂತೆ ವರದಿ ಬರೆಸಿದ್ದಾರೆ ಎಂದರು.

ಬ್ರಿಟಿಷರ ವಿರುದ್ದ ಹೋರಾಟ ಮಾಡಿದ್ದು ಹಳೆ ಕಾಂಗ್ರೆಸ್. ಈಗಿನ ಕಾಂಗ್ರೆಸ್ ನಲ್ಲಿ ಹಳಬರು ಇಲ್ಲ‌. ಈ ಕಾಂಗ್ರೆಸ್ ಒಕ್ಕಲಿಗರು, ಲಿಂಗಾಯತರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ‌. ಈಗಲೂ ಸಮಯವಿದೆ. ಆರು ತಿಂಗಳು ತಡವಾದರೂ ಪರವಾಗಿಲ್ಲ‌‌. ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವರದಿಯನ್ನು ಮತ್ತೆ ರೂಪಿಸಲಿ ಎಂದು ಆಗ್ರಹಿಸಿದರು.

ಈ ವರದಿಗೆ 150 ಕೋಟಿ ರೂ. ಖರ್ಚಾಗಿದೆ ಎನ್ನಲಾಗಿದೆ. ಅಧಿಕಾರಿ ಕಾಂತರಾಜು ಅವರನ್ನು ಮನೆಗೆ ಕರೆಸಿಕೊಂಡ ಸಿಎಂ ಸಿದ್ದರಾಮಯ್ಯ ಡಿಕ್ಟೇಶನ್ ಮಾಡಿಸಿ ವರದಿ ಬರೆಸಿದ್ದಾರೆ. ಬಳಿಕ ಕಾಂತರಾಜು ಸಹಿ ಹಾಕದೆ ಓಡಿದ್ದಾರೆ. ಈ ಹಣವನ್ನು ಯಾರು ತಿಂದಿದ್ದಾರೆ ಎಂದು ತನಿಖೆ ಮಾಡಬೇಕಿದೆ. ಕೇವಲ ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲು ವರದಿ ಮಾಡಲಾಗಿದೆ ಎಂದರು.

ಹಳ್ಳಿಕಾರ್, ಕುಂಚಿಟಿಗರನ್ನು ಬೇರೆ ಮಾಡಲಾಗಿದೆ. ರೆಡ್ಡಿ ಲಿಂಗಾಯತರನ್ನು ಪ್ರತ್ಯೇಕ ಮಾಡಲಾಗಿದೆ. ಇಂತಹ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅದನ್ನು ಸಚಿವರು ಒಪ್ಪಿದರೆ ಆಯಾ ಸಮುದಾಯದ ಜನರು ಅವರನ್ನು ಒಪ್ಪುವುದಿಲ್ಲ. ಈ ವರದಿಯಿಂದಾಗಿ ಕಾಂಗ್ರೆಸ್ ನಲ್ಲೇ ದಂಗೆ ಆರಂಭವಾಗಲಿದೆ. ಸಮುದಾಯಗಳ ಜನರು ಮುಂದಿನ ಚುನಾವಣೆಯಲ್ಲಿ ಇವರನ್ನು ಹತ್ತಿರ ಸೇರಿಸುವುದಿಲ್ಲ. ಒಕ್ಕಲಿಗ ಸ್ವಾಮೀಜಿಯವರು ಸಭೆ ಕರೆದು ಈ ಬಗ್ಗೆ ಚರ್ಚೆ ಮಾಡಲಿದ್ದಾರೆ. ಇದೇ ರೀತಿ ಬೇರೆ ಸಮುದಾಯದವರೂ ಸಭೆ ಮಾಡಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಸ್ವಾತಂತ್ರ್ಯ ಹೋರಾಟಗಾರರು ಸ್ಥಾಪಿಸಿದ್ದರು‌. ಆದರೆ ಬಳಿಕ ಇಟಲಿ ಮೂಲದ ಸೋನಿಯಾ ಗಾಂಧಿ ಹಾಗೂ ಮಕ್ಕಳು 5 ಸಾವಿರ ಕೋಟಿ ಆಸ್ತಿ ಲೂಟಿ ಮಾಡಿದ್ದಾರೆ. ಅದು ದೇಶದ ಆಸ್ತಿಯೇ ಹೊರತು, ಇಟಲಿಯ ಆಸ್ತಿಯಲ್ಲ. ಈ ನಿಟ್ಟಿನಲ್ಲಿ ಇಡಿ ಉತ್ತಮ ಕೆಲಸ ಮಾಡಿದೆ ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನದಲ್ಲಿ ದಲಿತರಿಗೆ ಮೀಸಲಾತಿ ನೀಡಿದ್ದಾರೆ. ಆದರೆ ಮುಸ್ಲಿಮರಿಗೆ ಮೀಸಲಾತಿ ನೀಡಲು ರಾಜ್ಯಕ್ಕೆ ಅಧಿಕಾರವಿಲ್ಲ‌. ಜೊತೆಗೆ ಒಟ್ಟು ಮೀಸಲಾತಿ 50% ಗಿಂತ ಹೆಚ್ಚು ಮಾಡಲು ಸಾಧ್ಯವಿಲ್ಲ. ಮೂಗಿಗೆ ತುಪ್ಪ ಸವರುವ ಕೆಲಸವನ್ನು ಸರ್ಕಾರ ಮಾಡಿದೆ. ಹೆಚ್ಚಿನ ಮೀಸಲಾತಿಯನ್ನು ಯಾವ ಕಾನೂನಿನಡಿ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಲಿ. ಬಿಜೆಪಿ ಇದ್ದಾಗ ಮುಸ್ಲಿಮರಿಗಿದ್ದ ಮೀಸಲಾತಿಯನ್ನು ತೆಗೆದು ಬೇರೆಯವರಿಗೆ ನೀಡಲಾಗಿತ್ತು ಎಂದರು‌.

ಬಿಜೆಪಿ-ಜೆಡಿಎಸ್ ಪ್ರತಿಭಟನೆಗೆ ವಿರುದ್ಧವಾಗಿ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿರುವುದರಲ್ಲಿ ಅರ್ಥವಿಲ್ಲ. ಹಾಲಿನ ದರ, ಡೀಸೆಲ್, ವಿದ್ಯುತ್ ಮೊದಲಾದ ದರಗಳನ್ನು ಕಾಂಗ್ರೆಸ್ ಏರಿಸಿದೆ. ಕಾಂಗ್ರೆಸ್ ಎಲ್ಲೂ ದರ ಇಳಿಕೆ ಮಾಡಿಲ್ಲ. ಬೆಂಗಳೂರಿನಲ್ಲಿ ಪಾರ್ಕಿಂಗ್, ಕಸ ಶುಲ್ಕ ಮಾಡಲಾಗಿದೆ. ಬೆಂಗಳೂರಿನ ಜನರನ್ನು ತೆರಿಗೆಯಿಂದಲೇ ಹಿಂಡುತ್ತಿದ್ದಾರೆ ಎಂದರು.

ಬೀದರ್ ವಿಮಾನಯಾನಕ್ಕೆ 14 ಕೋಟಿ ರೂ.ಮೀಸಲು: ಏ.16ರಂದು ಕಾಮಗಾರಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ

ಬಿಜೆಪಿ ಅವಧಿಯಲ್ಲಿ ಒಂದೇ ಒಂದು ಮನೆ ನೀಡಿರೋದು ಸಾಬೀತು ಮಾಡಿದ್ರೆ, ಸಚಿವ ಸ್ಥಾನಕ್ಕೆ ರಾಜೀನಾಮೆ: ಜಮೀರ್ ಸವಾಲ್

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

1 Min Read

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

2 Mins Read

ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು

2 Mins Read
Recent News

‘ಫ್ರೆಶ್’ ಕಾಣಲು ಸೌತೆಕಾಯಿಗೆ ವಿಷಕಾರಿ ಬಣ್ಣದ ಸ್ನಾನ! ಹಸಿರು ಪೇಂಟ್ ಹಚ್ಚುತ್ತಿದ್ದ ಮಹಿಳೆ ಸೆರೆ: ವಿಡಿಯೋ ವೈರಲ್

BREAKING: ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಡೌಟ್ | TVK Chief Vijay

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

ಹರಡುತ್ತಿದೆ ಹಂತಾವೈರಸ್ ಭೀತಿ: ದೇಶಾದ್ಯಂತ ಹದ್ದಿನ ಕಣ್ಣಿಟ್ಟ ಭಾರತೀಯ ಆರೋಗ್ಯ ಸಂಸ್ಥೆಗಳು

State News
KARNATAKA

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

By kannadanewsnow09 KARNATAKA 1 Min Read

ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಮಾರಿಕಾಂಬಾ ದೇವಸ್ಥಾನದ ತಿರುವಿನಲ್ಲಿ ಮರಗಳನ್ನು ತುಂಬಿದ್ದ ಲಾರಿ ಹಾಗೂ ಟಾಟಾ ಏಸ್ ನಡುವೆ…

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.