Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ಉದ್ಯೋಗಿನಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

24/12/2025 6:57 AM

ಪ್ರೀತಿಸಿ, ಮದುವೆಯಾಗಿ 25 ಲಕ್ಷ ರೂಪಾಯಿ ಪಡೆಯಿರಿ! ನಾಗರಿಕರಿಗೆ ಬಂಪರ್ ಆಫರ್ ನೀಡುತ್ತಿದೆ ಈ ದೇಶ!

24/12/2025 6:56 AM

PM ಕುಸುಮ್-ಬಿ ಯೋಜನೆ : `ಸೋಲಾರ್ ಪಂಪ್-ಸೆಟ್’ ಗಾಗಿ ಅರ್ಜಿ ಸಲ್ಲಿಸಿರುವ ರೈತರೇ ಡಿ.30ರೊಳಗೆ ತಪ್ಪದೇ ಈ ಕೆಲಸ ಮಾಡಿಕೊಳ್ಳಿ.!

24/12/2025 6:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಂಕಾಪುರಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ತೋಳ.!
KARNATAKA

ಬಂಕಾಪುರಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ತೋಳ.!

By kannadanewsnow5719/01/2025 9:24 AM

ಬೆಂಗಳೂರು : ಕರ್ನಾಟಕ ಅರಣ್ಯ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಫಲವಾಗಿ, ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳಗಳು ಸ್ವಚ್ಛಂದವಾಗಿ ವಿಹರಿಸುತ್ತಿದ್ದು, ಇತ್ತೀಚೆಗೆ ಹೆಣ್ಣು ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಮಾದ್ಯಮ ಹೇಳಿಕೆಯಲ್ಲಿ ಅವರು, ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿ ಸುಮಾರು 332 ಹೆಕ್ಟರ್ ಪ್ರದೇಶದಲ್ಲಿರುವ ಬಂಕಾಪೂರ ತೋಳ ಧಾಮವು ಕುರುಚಲು ಅರಣ್ಯದೊಳಗೆ ಗುಡ್ಡಗಳು, ಸ್ವಾಭಾವಿಕ ಗುಹೆಗಳನ್ನೂ ಹೊಂದಿದ್ದು, ತೋಳ, ಚಿರತೆ, ನವಿಲು, ಕತ್ತೆಕಿರುಬ, ನರಿ, ಮೊಲ, ಮುಳ್ಳುಹಂದಿಯೇ ಮೊದಲಾದ ಹಲವು ವನ್ಯಜೀವಿಗಳ ತಾಣವಾಗಿದೆ.

ಇಂಡಿಯನ್ ಗ್ರೇ ಉಲ್ಫ್ ಎಂಬ ಪ್ರಭೇದದ ತೋಳಗಳು ಈ ಸಂರಕ್ಷಿತ ಪ್ರದೇಶದಲ್ಲಿದ್ದು, ಇತ್ತೀಚೆಗೆ 8 ಮರಿಗಳಿಗೆ ಒಂದು ತೋಳ ಜನ್ಮ ನೀಡಿದೆ. ಇವುಗಳ ಪೈಕಿ ಸಾಮಾನ್ಯವಾಗಿ ಪ್ರತಿಶತ 50ರಷ್ಟು ಬದುಕುಳಿಯುವ ಸಾಧ್ಯತೆ ಇರುತ್ತದೆ, ಆದರೆ ಎಲ್ಲ ತೋಳದ ಮರಿಗಳನ್ನೂ ಉಳಿಸಲು ಅರಣ್ಯಾಧಿಕಾರಿಗಳು ಕ್ರಮವಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಪ್ರದೇಶವನ್ನು ತೋಳವನ್ಯಧಾಮ ಎಂದು 15ನೇ ವನ್ಯಜೀವಿ ಮಂಡಳಿಯ ಸಭೆಯಲ್ಲಿ ಘೋಷಿಸಲಾಗಿದ್ದು, ಜ.18ರಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಗೂ ನಿರ್ಣಯಿಸಲಾಗಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಬಂಕಾಪೂರ ತೋಳ ವನ್ಯಧಾಮದಲ್ಲಿ ಈ 8 ಮರಿಗಳೂ ಸೇರಿ ಸುಮಾರು 35-40 ತೋಳಗಳಿವೆ. ಇವುಗಳ ಸುರಕ್ಷತೆಗೆ ಕ್ರಮ ವಹಿಸಲಾಗಿದೆ. ನವಜಾತ ತೋಳದ ಮರಿಗಳಿಗೆ ಜನರಿಂದ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರವಾಸಿ ತಾಣವಾಗಿ ಅಭಿವೃದ್ಧಿ:
ಗಂಗಾವತಿ ನಗರದಿಂದ 15 ಕಿ.ಮೀ ದೂರದಲ್ಲಿರುವ ಈ ವನ್ಯಜೀವಿ ಧಾಮದಲ್ಲಿ ಸಫಾರಿ ವ್ಯವಸ್ಥೆ ಕಲ್ಪಿಸಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಉದ್ದೇಶವಿದೆ. ಈ ನಿಟ್ಟಿನಲ್ಲಿ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.

Wolf gives birth to 8 cubs in Bankapur dham ಬಂಕಾಪುರಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ತೋಳ.!
Share. Facebook Twitter LinkedIn WhatsApp Email

Related Posts

vidhana soudha

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ಉದ್ಯೋಗಿನಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

24/12/2025 6:57 AM1 Min Read

PM ಕುಸುಮ್-ಬಿ ಯೋಜನೆ : `ಸೋಲಾರ್ ಪಂಪ್-ಸೆಟ್’ ಗಾಗಿ ಅರ್ಜಿ ಸಲ್ಲಿಸಿರುವ ರೈತರೇ ಡಿ.30ರೊಳಗೆ ತಪ್ಪದೇ ಈ ಕೆಲಸ ಮಾಡಿಕೊಳ್ಳಿ.!

24/12/2025 6:52 AM1 Min Read

ಆಸ್ತಿ ಮಾಲೀಕರೇ ಗಮನಿಸಿ : ಇನ್ನು ಮನೆಯಲ್ಲೇ ಕುಳಿತು ಆನ್ ಲೈನ್ ನಲ್ಲಿ `ಇ-ಖಾತೆ’ ಪಡೆಯಲು ಅವಕಾಶ

24/12/2025 6:50 AM1 Min Read
Recent News
vidhana soudha

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ಉದ್ಯೋಗಿನಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

24/12/2025 6:57 AM

ಪ್ರೀತಿಸಿ, ಮದುವೆಯಾಗಿ 25 ಲಕ್ಷ ರೂಪಾಯಿ ಪಡೆಯಿರಿ! ನಾಗರಿಕರಿಗೆ ಬಂಪರ್ ಆಫರ್ ನೀಡುತ್ತಿದೆ ಈ ದೇಶ!

24/12/2025 6:56 AM

PM ಕುಸುಮ್-ಬಿ ಯೋಜನೆ : `ಸೋಲಾರ್ ಪಂಪ್-ಸೆಟ್’ ಗಾಗಿ ಅರ್ಜಿ ಸಲ್ಲಿಸಿರುವ ರೈತರೇ ಡಿ.30ರೊಳಗೆ ತಪ್ಪದೇ ಈ ಕೆಲಸ ಮಾಡಿಕೊಳ್ಳಿ.!

24/12/2025 6:52 AM

ಆಸ್ತಿ ಮಾಲೀಕರೇ ಗಮನಿಸಿ : ಇನ್ನು ಮನೆಯಲ್ಲೇ ಕುಳಿತು ಆನ್ ಲೈನ್ ನಲ್ಲಿ `ಇ-ಖಾತೆ’ ಪಡೆಯಲು ಅವಕಾಶ

24/12/2025 6:50 AM
State News
vidhana soudha KARNATAKA

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ಉದ್ಯೋಗಿನಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

By kannadanewsnow5724/12/2025 6:57 AM KARNATAKA 1 Min Read

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮವು 2025-26 ನೇ ಸಾಲಿನ ಉದ್ಯೋಗಿನಿ, ಚೇತನಾ,…

PM ಕುಸುಮ್-ಬಿ ಯೋಜನೆ : `ಸೋಲಾರ್ ಪಂಪ್-ಸೆಟ್’ ಗಾಗಿ ಅರ್ಜಿ ಸಲ್ಲಿಸಿರುವ ರೈತರೇ ಡಿ.30ರೊಳಗೆ ತಪ್ಪದೇ ಈ ಕೆಲಸ ಮಾಡಿಕೊಳ್ಳಿ.!

24/12/2025 6:52 AM

ಆಸ್ತಿ ಮಾಲೀಕರೇ ಗಮನಿಸಿ : ಇನ್ನು ಮನೆಯಲ್ಲೇ ಕುಳಿತು ಆನ್ ಲೈನ್ ನಲ್ಲಿ `ಇ-ಖಾತೆ’ ಪಡೆಯಲು ಅವಕಾಶ

24/12/2025 6:50 AM

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `ಹಳೇ ಪಿಂಚಣಿ’ ಮರುಜಾರಿಗೆ ತಿಂಗಳಲ್ಲಿ ವರದಿ.!

24/12/2025 6:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.