Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘TVK’ ಪಕ್ಷದ ಅಭ್ಯರ್ಥಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಗೆ ಹೀನಾಯ ಸೋಲು!

04/05/2026 4:03 PM

ಬಿಸಿಲ ಧಗೆಗೆ ಬಾಡುತ್ತಿದೆ ಬಾಲ್ಯ: ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ಮಕ್ಕಳಲ್ಲಿ ಅಪೌಷ್ಟಿಕತೆ

04/05/2026 3:44 PM

ಸಿನಿಮಾ ಮಾತ್ರವಲ್ಲ, ಹೂಡಿಕೆಯಲ್ಲೂ ‘ದಳಪತಿ’ ವಿಜಯ ಮಾದರಿ: 624 ಕೋಟಿ ಆಸ್ತಿಯ ಹಿಂದಿರುವ ಸಕ್ಸಸ್ ಸೀಕ್ರೆಟ್!

04/05/2026 3:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಿಳೆಯರಿಗೆ ತಿಂಗಳಿಗೆ ಎರಡು ಸಾವಿರ ಕೊಟ್ಟು ಬಾಯಿ ಮುಚ್ಚಿಸಲು ಸಾಧ್ಯವಿಲ್ಲ: ಸಂಸದ ಬೊಮ್ಮಾಯಿ
KARNATAKA

ಮಹಿಳೆಯರಿಗೆ ತಿಂಗಳಿಗೆ ಎರಡು ಸಾವಿರ ಕೊಟ್ಟು ಬಾಯಿ ಮುಚ್ಚಿಸಲು ಸಾಧ್ಯವಿಲ್ಲ: ಸಂಸದ ಬೊಮ್ಮಾಯಿ

By kannadanewsnow0913/12/2025 7:04 PM

ಹುಬ್ಬಳ್ಳಿ: ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. ಪ್ರತಿ ದಿನ ಅತ್ಯಾಚಾರ, ದೌರ್ಜನ್ಯ, ಆತ್ಮಹತ್ಯೆ, ಕೊಲೆ ನಡೆಯುತ್ತಿವೆ. ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣದಿಂದ ಹಿಡಿದು ಈ ಸರ್ಕಾರದಲ್ಲಿ ಇಂದಿಗೂ ನಿಂತಿಲ್ಲ. ಇದರ ವಿರುದ್ಧ ಸಾಮಾಜಿಕ ಜಾಗೃತಿ ಮಾಡಬೇಕು. ಮಹಿಳೆಯರಿಗೆ ತಿಂಗಳಿಗೆ ಎರಡು ಸಾವಿರ ಕೊಟ್ಟು ಬಾಯಿ ಮುಚ್ಚಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಭಾರತೀಯ ಜನತಾ ಪಾರ್ಟಿ ಕರ್ನಾಟಕ ಮಹಿಳಾ ಮೋರ್ಚಾದ ವತಿಯಿಂದ ಇಂದು ಹುಬ್ಬಳ್ಳಿಯ ಅರವಿಂದ ನಗರದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಉತ್ತರ ಕರ್ನಾಟಕ ವಿಭಾಗದ ಮಹಿಳಾ ಮೋರ್ಚಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕರ್ನಾಟಕದ ಭವಿಷ್ಯದ ಮಹಿಳಾ ಶಕ್ತಿ ಇಲ್ಲಿ ಸೇರಿದೆ ಅಂತ ಅನಿಸುತ್ತಿದೆ. ಭವಿಷ್ಯದ ದೃಷ್ಟಿ ಇಟ್ಟುಕೊಂಡು ತಮ್ಮನ್ನು ಇಲ್ಲಿ ಸೇರಿಸಿದ್ದಾರೆ. ಅನ್ಯಾಯದ ವಿರುದ್ಧ ಧ್ವನಿ ಎತ್ತಲು ತಮ್ಮನ್ನು ಸಂಘಟನೆ ಮಾಡಲು ಸೇರಿಸಿದ್ದಾರೆ. ಅದರ ಮೂಲಕ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಭವ್ಯ ಭವಿಷ್ಯ ಬರೆಯಲು ಸೇರಿಸಿದ್ದಾರೆ. ಈಗ ನಿಮ್ಮ ನಾಯಕತ್ವದ ಗುಣಗಳನ್ನು ತೋರಿಸಿದರೆ 2030 ಕ್ಕೆ ಬರುವಂತಹ ಮೀಸಲಾತಿಯಲ್ಲಿ ತಾಯಂದಿರಿಗೆ ನಾಯಕತ್ವ ತೋರಿಸಲು ಆವಕಾಶ’ ಸಿಗುತ್ತದೆ. ಭಾರತದ ಸುಸಂಸ್ಕೃತಿ ಸಂಸ್ಕಾರ ಯಾವುದಾದರೂ ರಾಜಕೀಯ ಪಕ್ಷದಲ್ಲಿ ಇದ್ದರೆ ಅದು ಬಿಜೆಪಿಯಲ್ಲಿದೆ. ನೀವು ಯಶಸ್ವಿ ಗೃಹಿಣಿಯರಾಗಿ, ತಾಯಂದಿರಾಗಿ ನಿಮ್ಮ ನೈತಿಕತೆಯನ್ನು ಉಳಿಸಿಕೊಂಡು ಬಿಜೆಪಿಯಲ್ಲಿ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಲು ಬಂದಿದ್ದೀರಿ. ಶೇ 50 ರಷ್ಟಿರುವ ಮಹಿಳಾ ಶಕ್ತಿ ಭಾರತವನ್ನು ಇಡೀ ವಿಶ್ವದಲಿಯೇ ಉನ್ನತ ಸ್ಥಾನಕ್ಕೆ ತೆಗೆದುಕೊಂಡು ಹೋಗುವ ಶಕ್ತಿ ಹೊಂದಿದೆ. ಶೇ 50 ರಷ್ಟು ಅವಕಾಶ ಕೊಟ್ಟರೂ ಭಾರತ ಅಭಿವೃದ್ಧಿಯಾಗುತ್ತದೆ. ಹತ್ತು ವರ್ಷದಲ್ಲಿ ಆಗಬೇಕಾದ ಕೆಲಸ ಐದು ವರ್ಷದಲ್ಲಿ ಆಗಬೇಕೆಂದರೆ ಮಹಿಳೆಯರಿಗೆ ಅವಕಾಶ ಕೊಡಬೇಕು. ಭಾರತದ ಮಹಿಳೆ ಅಬಲೆಯಲ್ಲ ಸಬಲೆ, ಅವಕಾಶ ಸಿಕ್ಕರೆ ಏನೆಲ್ಲ ಮಾಡಬಹುದು ಎನ್ನುವುದನ್ನು ಇತಿಹಾಸದಲ್ಲಿ ಕಿತ್ತೂರು ಚೆನ್ನಮ್ಮ, ಝಾನ್ಸಿರಾಣಿ ಲಕ್ಷ್ಮೀ ಬಾಯಿ ತೋರಿಸಿಕೊಟ್ಟಿದ್ದಾರೆ. ಮೊಗಲರ ಕಾಲದಲ್ಲಿ ನಮ್ಮ ಮಹಿಳೆಯರ ಮೇಲೆ ಅತ್ಯಾಚಾರ, ಅನಾಚಾರ ನಡೆದರೂ ಅದನ್ನು ಸಹಿಸಿಕೊಂಡು ಈ ದೇಶದ ಸಿಂಧೂರ ಉಳಿಸಿಕೊಂಡು ಬಂದಿರುವುದು ನಮ್ಮ ತಾಯಂದಿರು. ಮಹಿಳೆಯರು ಎಲ್ಲ ರಂಗದಲ್ಲಿಯೂ ಇದ್ದಾರೆ. ನಾಸಾದಲ್ಲಿ ಹೆಚ್ಚು ಭಾರತಿಯರಿದ್ದರೆ ಇಸ್ರೋದಲ್ಲಿ ಐವತ್ತರಷ್ಟು ಮಹಿಳೆಯರಿದ್ದಾರೆ. ನಿಮ್ಮಲ್ಲಿ ಪ್ರಾಮಾಣಿಕತೆ, ನಿಷ್ಠೆ ಇರುತ್ತದೆ ಎಂದ ಹೇಳಿದರು.

ಉಳಿತಾಯ ಆರ್ಥಿಕತೆ

ಇವತ್ತು ನಮ್ಮ ಭಾರತ ಆರ್ಥಿಕವಾಗಿ ಸಬಲವಾಗಲು ಕಾರಣ ಏನೆಂದರೆ ವಿದೇಶದಲ್ಲಿ ಅತಿ ಹೆಚ್ಚು ಖರ್ಚು ಮಾಡುವುದೇ ಬೆಳವಣಿಗೆ ಅಂದುಕೊಂಡಿದ್ದಾರೆ. ಇದ್ದ ಆದಾಯದಲ್ಲಿ ಉಳಿತಾಯ ಮಾಡುವುದು ನಮ್ಮ ಆರ್ಥಿಕತೆ, ನಮ್ಮದು ಉಳಿತಾಯ ಆರ್ಥಿಕತೆ, ನಮ್ಮ ಭಾರತದಲ್ಲಿ ಉಳಿತಾಯ ಮಾಡುವ ಸಂಸ್ಕೃತಿ ಹೆಚ್ಚಿದೆ. ಗಂಡ ಹತ್ತು ಸಾವಿರ ರೂ. ಕೊಟ್ಟಿದ್ದರೆ ಹೆಂಡತಿ ಕನಿಷ್ಠ ಎರಡು ಸಾವಿರ ರೂ. ಉಳಿಸಿರುತ್ತಾರೆ. ಅಮೇರಿಕಾದ ಆರ್ಥಿಕತೆಗೆ ಪ್ರತಿಸ್ಪರ್ಧಿ ನಮ್ಮ ಸಾಸಿವೆ ಜೀರಿಗೆ ಡಬ್ಬಿ. ಅಮೇರಿಮಾದ ಆರ್ಥಿಕತೆಯೊಂದಿಗೆ ಸಾಸಿವೆ ಡಬ್ನಿ ಸ್ಪರ್ಧೆಗೆ ಇಟ್ಟರೆ ಸಾಸಿವೆ ಜೀರಿಗೆ ಡಬ್ಬಿಯೇ ಗೆಲ್ಲುತ್ತದೆ. ಕಷ್ಟಕಾಲದಲ್ಲಿ ಅದು ನಮ್ಮನ್ನು ಕಾಪಾಡುತ್ತದೆ. ನಮ್ಮ ತಾಯಂದಿರು ಆದನ್ನು ಒಂದು ಸಂಸ್ಕೃತಿಯಾಗಿ ಉಳಿಸಿಕೊಂಡು ಬಂದಿದ್ದಾರೆ. ಎಲ್ಲ ಕಾರ್ಯಕ್ರಮಗಳಲ್ಲಿಯೂ ಅತಿ ಹೆಚ್ಚು ಮಹಿಳೆಯರು ಪಾಲ್ಗೊಳ್ಳುತ್ತಾರೆ. ಗದಗನಲ್ಲಿ ಒಂದು ಹೋಮ ನಡೆಯಿತು. ಅಲ್ಲಿ ಸುಮಾರು ಹದಿನೈದು ಸಾವಿರ ಮಹಿಳೆಯರು ಬಂದಿದ್ದರು. ಅಷ್ಟು ದೊಡ್ಡ ಪ್ರಮಾಣದಲ್ಲಿ ಬಂದಿದ್ದರು. ಆಗ ಮಹಿಳಾ ಶಕ್ತಿ ಎಷ್ಟಿದೆ ಅಂತ ಅರಿವಿಗೆ ಬಂತು. ಅವರು ನಮ್ಮ ಹಿಂದೂ ಧರ್ಮದ ಮೇಲಿನ ವಿಶ್ವಾಸದಿಂದ ಬಂದಿದ್ದರು. ದೇವಾಲಯಗಳಲ್ಲಿ ನಮ್ಮ ತಾಯಂದಿರು ಹೆಚ್ಚಿನ ಸಂಖ್ಯೆಯಲ್ಲಿ ಹೆಚ್ಚಿರುತ್ತಾರೆ. ಮುಂದಿನ ಪೀಳಿಗೆಯನ್ನು ಸುಸಂಸ್ಕೃತ ಮಾಡುವುದರಲ್ಲಿ ತಾಯಂದಿರ ಪಾತ್ರ ಬಹಳ ಮುಖ್ಯವಾಗಿದೆ. ತಾಯಿತನ ಅತ್ಯಂತ ಶ್ರೇಷ್ಟವಾಗಿದೆ. ನಾವು ಭೂಮಿಗೆ ಬರುವ ಮುಂಚೆ ಇರುವುದು ತಾಯಿಯ ಸಂಬಂಧ’. ಉಳಿದ ಸಂಬಂಧಗಳು ನಾವು ಹುಟ್ಟಿದ ನಂತರ ಬರುತ್ತವೆ. ಆ ತಾಯಿತನ ಎಲ್ಲವನ್ನು ಕಲಿಸಿಕೊಡುತ್ತದೆ ಎಂದು ಹೇಳಿದರು.

ಆಂದೋಲನ ನಡೆಯಲಿ

ಇಷ್ಟೆಲ್ಲ ಆದರೂ ನಮ್ಮತನ ರಕ್ಷಣೆ ಮಾಡುವ ಕಾಲ ಬಂದಿದೆ. ಹಿಂದೂ ಸಮಾಜ ತನ್ನಷ್ಟಕ್ಕೆ ತಾನೇ ಸ್ವಾಭಿಮಾನದಿಂದ ದುಡಿದು ಮುಂದೆ ಬರುತ್ತಿದ್ದರೆ ಕೆಲವರಿಗೆ ಸಹಿಸಿಕೊಳ್ಳಲು ಆಗುವುದಿಲ್ಲ. ಕರ್ನಾಟಕದಲ್ಲಿ ಮಹಿಳೆರಯಿಗೆ ಸುರಕ್ಷತೆ ಇಲ್ಲ. ಪ್ರತಿ ದಿನ ಅತ್ಯಾಚಾರ, ದೌರ್ಜನ್ಯ, ಆತ್ಮಹತ್ಯೆ, ಕೊಲೆ ನಿರಂತರ ನಡೆಯುತ್ತಿವೆ. ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣದಿಂದ ಹಿಡಿದು ಈ ಸರ್ಕಾರದಲ್ಲಿ ಇಂದಿಗೂ ನಿಂತಿಲ್ಲ. ಇದರ ವಿರುದ್ಧ ಸಾಮಾಜಿಕ ಜಾಗೃತಿ ಮಾಡಬೇಕು. ಮಹಿಳೆಯರಿಗೆ ತಿಂಗಳಿಗೆ ಎರಡು ಸಾವಿರ ಕೊಟ್ಟು ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಮಹಿಳೆಯರು ಸುರಕ್ಷತೆ ನೀಡದೆ ಮಕ್ಕಳು ಮನೆಗೆ ಬರದಂತಹ ಪರಿಸ್ಥಿತಿ ನಿರ್ಮಾಣ ಮಾಡಿ ಎಡರು ಸಾ ವಿರ ಕೊಟ್ಟರೆ ಅವರು ಸುಮ್ಮನಿರುತ್ತಾರೆಯೇ. ಗೃಹ ಸಚಿವರು ಅಂಕಿ ಸಂಖ್ಯೆಗಳ ಮೂಲಕ ಎಲ್ಲವನ್ನು ಮುಚ್ಚಿ ಹಾಕಲು ಸಾಧ್ಯವಿಲ್ಲ. ಗೃಹ ಸಚಿವರ ಕೈಯಲ್ಲಿ ಗೃಹ ಇಲಾಖೆ ಇಲ್ಲ. ಪ್ರತಿ ದಿನ ಸಾಕಷ್ಟು ಘಟನೆಗಳು ನಡೆಯುತ್ತವೆ. ಆದನ್ನು ನಿಲ್ಲಿಸಲು ಆಗುತ್ತಿಲ್ಲ. ಜನರು ಇದಿದ್ದು ಇದ್ದಂಗ ಮಾತನಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ತಂದಿದ್ದಾರೆ. ಮಹಿಳೆಯರ ಸುರಕ್ಷತೆಗೆ ಏನಾದರೂ ಕಾನೂನು ತನ್ನಿ. ಕೇಂದ್ರ ಸರ್ಕಾರ ನಿರ್ಭಯ ಯೋಜನೆ ಅಡಿಯಲ್ಲಿ ಮಹಿಳೆಯರ ರಕ್ಷಣೆಗೆ ಹಣ ನೀಡುತ್ತದೆ ಅದನ್ನು ಬಳಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಕೇಂದ್ರ ಸರ್ಕಾರದ ಸಂಜೀವಿನಿ ಯೋಜನೆ ಮಹಿಳಾ ಸಂಘಟನೆಗೆ ನೀಡುವುದು ಅದನ್ನು ನಿಲಿಸಿದ್ದಾರೆ. ನಾನು ಸಿಎಂ ಇದ್ದಾಗ ಮಹಿಳಾ ಸಂಘಗಳಿಗೆ ಪ್ರತಿ ವರ್ಷ ಒಂದು ಲಕ್ಷ ನೀಡುವ ಸಾಮರ್ಥ್ಯ ಯೋಜನೆ ಮಾಡಿದ್ದೆ ಅದನ್ನು ನಿಲ್ಲಿಸಿದ್ದಾರೆ. ಮಕ್ಕಳಿಗೆ ಅತ್ಯಂತ ಕಳಪೆ ಮಟ್ಟದ ಊಟ ಕೊಡುತ್ತಿದ್ದಾರೆ. ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂಎಂಆರ್, ಮತ್ತು ಐಎಂಆರ್. ಮದರ್ ಮಾರ್ಟಿಲಿಟಿ ರೇಸಿಯೋ, ಇನ್‌ಫಾಂಟ್ ಮಾರ್ಟಿಲಿಟಿ ರೇಷಿಯೋ, ಒಂದು ಸಾವಿರಕ್ಕೆ ಎಷ್ಟು ತಾಯಂದಿರು ಮತ್ತು ಎಷ್ಟು ಮಕ್ಕಳು ಸಾಯುತ್ತಾರೆ ಎಂದರೆ ಕರ್ನಾಟಕದಲ್ಲಿಯೇ ಹೆಚ್ಚಾಗಿದೆ. ನಮ್ಮ ಅವಧಿಯಲ್ಲಿ ಕಡಿಮೆ ಇತ್ತು. ಈಗ ಮತ್ತೆ ಹೆಚ್ಚಾಗಿದೆ.

ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ರಾಯಚೂರಿನಲ್ಲಿ ಅತಿ ಹೆಚ್ಚು ತಾಯಿ ಮತ್ತು ಮಕ್ಕಳು ಸಾಯುತ್ತಿದ್ದಾರೆ. ಮುಂದಿನ ಪೀಳಿಗೆಯನ್ನು ನಾಶಮಾಡುವ ಕೆಲಸವನ್ನು ಈ ಸರ್ಕಾರ ಮಾಡುತಿದೆ. ಮಹಿಳೆಯುರ ಮಕ್ಕಳು ಸಾಮಜಿಕ ನ್ಯಾಯ, ಮಹಿಳಾ ಸಬಲೀಕರಣ, ಮಹಿಳೆಯರ ಆರ್ಥಿಕತೆ ನಿಮ್ಮ ಹೋರಾಟ ಆಗಬೇಕು. ನೀವು ಬೀದಿಗಿಳಿದು ಹೋರಾಟ ಮಾಡಿದರೆ ಜಗತ್ತಿನ ಯಾವುದೇ ಶಕ್ತಿ ತಡೆಯಲು ಸಾಧ್ಯವಿಲ್ಲ. ಸರ್ಕಾರಕ್ಕೆ ಎರಡು ಸಾವಿರ ಕೊಟ್ಟರೆ ಯಾರೂ ಏನೂ ಕೇಳುವುದಿಲ್ಲ ಎನ್ನುವ ಭ್ರಮೆ ಇದೆ. ದುಡಿಯುವ ಮಹಿಳೆಗೆ ಹಲವಾರು ಸಮಸ್ಯೆಗಳಿವೆ. ತಾವೆಲ್ಲ ವೀರರಾಣಿ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು. ಮಹಾಲಕ್ಷ್ಮೀ ಸರಸ್ವತಿ ಆದರೆ ಎಲ್ಲರೂ ಬಂದು ನಮಸ್ಕಾರ ಮಾಡುತ್ತಾರೆ. ನಾವು ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಮನೆಯೊಳಗೆ ಆಗದಿದ್ದರೂ ಹೊರಗೆ ದುರ್ಗಾ ಆಗಲೇಬೇಕು. ಎಲ್ಲಿ ಅನ್ಯಾಯ ನಡೆಯುತ್ತದೆ’ ಅಲ್ಲಿ ನೀವು ಇರಬೇಕು. ನೀವು ಅಲ್ಲಿಗೆ ಹೋದರೆ ವಾತಾವರಣ ಬೇರೆ ಆಗುತ್ತದೆ. ಅಧಿಕಾರಿಗಳ ನಡವಳಿಗೆ ಬದಲಾಗುತ್ತದೆ. ನ್ಯಾಯ ಸಿಗುತ್ತದೆ. ನಾವು ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ. ಇದೊಂದು ದೊಡ್ಡ ಆಂದೋಲನ ಮಾಡಿ ಪರಿವರ್ತನೆ ತರಬೇಕು. ಮುಂದೆ ಯಾವುದೇ ಸಕಾರ ಬಂದರೂ ಮಹಿಳೆಗೆ ಅನ್ಯಾಯ ಅತ್ಯಾಚಾರ ಆಗಬಾರದು, ಅಕ್ಕ ಮಹಾದೇವಿ, ಬಸವಣ್ಣ, ಚೆನ್ನಮ್ಮ ಶೃಂಗೇರಿಯ ಶಾರದಾಂಬೆಯ ನಾಡಿನಲ್ಲಿ ಅತ್ಯಂತ ಸುರಕ್ಷಿತವಾಗಿ ನಿಮ್ಮ ಕಾಯಕ ಮಾಡಿ ಮೊದಲು ದುರ್ಗಾ ಆಗಿ, ನಂತರ ಶಾರದಾಂಬೆ, ಮಹಾಲಕ್ಷ್ಮೀ, ಮಹಾಸರಸ್ವತಿ ಆಗಬೇಕು ಎಂದು ಹೇಳಿದರು.

ಈ ಸಂಧರ್ಭದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷರಾದ ಕುಮಾರಿ ಸಿ ಮಂಜುಳಾ, ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಸುವರ್ಣಾ, ಡಾ ಶೋಭಾ ನಿಸ್ಸಿಮಗೌಡ್ರ, ಕಾರ್ಯಕಾರಿಣಿ ಸದಸ್ಯರಾದ ರಾಜೇಶ್ವರಿ ಸಾಲಗಟ್ಟಿ, ರೇಖಾ ಹೆಗಡೆ ಮಾಜಿ ಶಾಸಕರಾದ ಸೀಮಾ ಮಸೂತಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಸೀಮಾ ಲದವಾ ಸೇರಿದಂತೆ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸರ್ಕಾರ ಅಪಾರ್ಟ್ಮೆಂಟ್ ನಿವಾಸಿಗಳು ಹಾಗೂ ಮನೆ ಖರೀದಿದಾರರ ಪರ ನಿಲ್ಲುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಪೋಷಕರೇ ಗಮನಿಸಿ : ಮಕ್ಕಳಿಗೆ ‘ಬ್ಲೂ ಆಧಾರ್ ಕಾರ್ಡ್’ ಮಾಡಿಸುವುದು ಹೇಗೆ.? ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

BIG NEWS : ದಾವಣಗೆರೆಯಲ್ಲಿ ‘SDPI’ ಓಟ್ ನಮಗೆ ಬಹಳ ಡೇಂಜರ್ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ

04/05/2026 3:37 PM1 Min Read

ಕನ್ನಡ ಹೋರಾಟಗಾರರ ಮೇಲಿನ ಮೊಕದ್ದಮೆ ಹಿಂಪಡೆಯಲು ಕರವೇ ಆಗ್ರಹ: ಗೃಹ ಸಚಿವರಿಗೆ ನಾರಾಯಣಗೌಡ ಮನವಿ

04/05/2026 3:34 PM2 Mins Read

BIG NEWS : ಶೃಂಗೇರಿ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ಆರೋಪ : ಜೀವರಾಜ್ ಸೇರಿ ಮೂವರ ವಿರುದ್ಧ FIR ದಾಖಲು

04/05/2026 3:28 PM1 Min Read
Recent News

BREAKING : ‘TVK’ ಪಕ್ಷದ ಅಭ್ಯರ್ಥಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಗೆ ಹೀನಾಯ ಸೋಲು!

04/05/2026 4:03 PM

ಬಿಸಿಲ ಧಗೆಗೆ ಬಾಡುತ್ತಿದೆ ಬಾಲ್ಯ: ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ಮಕ್ಕಳಲ್ಲಿ ಅಪೌಷ್ಟಿಕತೆ

04/05/2026 3:44 PM

ಸಿನಿಮಾ ಮಾತ್ರವಲ್ಲ, ಹೂಡಿಕೆಯಲ್ಲೂ ‘ದಳಪತಿ’ ವಿಜಯ ಮಾದರಿ: 624 ಕೋಟಿ ಆಸ್ತಿಯ ಹಿಂದಿರುವ ಸಕ್ಸಸ್ ಸೀಕ್ರೆಟ್!

04/05/2026 3:41 PM

BIG NEWS : ದಾವಣಗೆರೆಯಲ್ಲಿ ‘SDPI’ ಓಟ್ ನಮಗೆ ಬಹಳ ಡೇಂಜರ್ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ

04/05/2026 3:37 PM
State News
KARNATAKA

BIG NEWS : ದಾವಣಗೆರೆಯಲ್ಲಿ ‘SDPI’ ಓಟ್ ನಮಗೆ ಬಹಳ ಡೇಂಜರ್ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ

By kannadanewsnow0504/05/2026 3:37 PM KARNATAKA 1 Min Read

ಬೆಂಗಳೂರು : ದಾವಣಗೆರೆಯಲ್ಲಿ ಎಸ್‌ಡಿಪಿಐನ್ನು ಲೈಟ್ಆಗಿ ತೆಗೆದುಕೊಂಡಿರಲಿಲ್ಲ. ಅದು ಪೊಲಿಟಿಕಲ್ ಪಾರ್ಟಿ ಅಲ್ಲ. ಮುಸ್ಲಿಂ ನಾಯಕರು ಕೆಲಸ ಮಾಡಿಲ್ಲ ಅನ್ನೋ…

ಕನ್ನಡ ಹೋರಾಟಗಾರರ ಮೇಲಿನ ಮೊಕದ್ದಮೆ ಹಿಂಪಡೆಯಲು ಕರವೇ ಆಗ್ರಹ: ಗೃಹ ಸಚಿವರಿಗೆ ನಾರಾಯಣಗೌಡ ಮನವಿ

04/05/2026 3:34 PM

BIG NEWS : ಶೃಂಗೇರಿ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ಆರೋಪ : ಜೀವರಾಜ್ ಸೇರಿ ಮೂವರ ವಿರುದ್ಧ FIR ದಾಖಲು

04/05/2026 3:28 PM

ನೈರುತ್ಯ ರೈಲ್ವೆ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಕೊಕ್: ರೈಲು ತಡೆ ಹೋರಾಟದ ಎಚ್ಚರಿಕೆ ನೀಡಿದ ಕರವೇ ಅಧ್ಯಕ್ಷ ನಾರಾಯಣಗೌಡ

04/05/2026 3:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.