Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಟೂತ್‌ಪೇಸ್ಟ್ ಅಸಲಿಯೇ? ದೆಹಲಿಯಲ್ಲಿ ಬಯಲಾಯ್ತು ನಕಲಿ ‘ಸೆನ್ಸೋಡೈನ್’ ಫ್ಯಾಕ್ಟರಿ! ಬ್ರ್ಯಾಂಡೆಡ್ ಹೆಸರಿನಲ್ಲಿ ವಿಷಕಾರಿ ಕೆಮಿಕಲ್ ಮಾರಾಟ!

03/04/2026 8:15 PM

Watch Video: ಬೆಚ್ಚಿಬೀಳಿಸುವ ವಿಡಿಯೋ: ಗುಜರಾತ್‌ನಲ್ಲಿ ಸ್ಕೂಟಿ ಸವಾರನ ಮೇಲೆ ಮುಗಿಬಿದ್ದ ಅತಿ ಬಲಶಾಲಿ ಗೂಳಿ!

03/04/2026 8:09 PM

ಅಮೇರಿಕಾದ F-35 ಯುದ್ಧ ವಿಮಾನ ಹೊರಡೆದುರುಳಿಸಿದ ಇರಾನ್: ಖಚಿತಪಡಿಸಿದ ಯುಎಸ್, ಪೈಲಟ್ ಗಾಗಿ ಶೋಧ

03/04/2026 8:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಕ್ತಿ ಯೋಜನೆಯನ್ನು ಮಹಿಳಾ ಕಾರ್ಮಿಕರು ಸಮರ್ಪಕವಾಗಿ ಬಳಸಿಕೊಳ್ಳಿ: ಶಾಸಕ ಗಣಿಗ ರವಿಕುಮಾರ್
KARNATAKA

ಶಕ್ತಿ ಯೋಜನೆಯನ್ನು ಮಹಿಳಾ ಕಾರ್ಮಿಕರು ಸಮರ್ಪಕವಾಗಿ ಬಳಸಿಕೊಳ್ಳಿ: ಶಾಸಕ ಗಣಿಗ ರವಿಕುಮಾರ್

By kannadanewsnow0901/02/2025 10:08 PM

ಮಂಡ್ಯ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಯನ್ನು ಮಹಿಳಾ ಕಾರ್ಮಿಕರು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಮಂಡ್ಯ ಶಾಸಕ ಗಣಿಗ ರವಿಕುಮಾರ್ ತಿಳಿಸಿದರು.

ಮದ್ದೂರು ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿ ಶಾಹಿ ಎಕ್ಸ್ಪೋರ್ಟ್ ಪ್ರೈ ಲಿ ವತಿಯಿಂದ ನೂತನವಾಗಿ ನಿರ್ಮಿಸಿರುವ ಬಸ್ ನಿಲ್ದಾಣ ಹಾಗೂ ಸೋಲಾರ್ ಬೀದಿ ದೀಪಗಳನ್ನು ಶನಿವಾರ ಅನಾವರಣಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿ ಹಲವು ಗಾರ್ಮೆಂಟ್ಸ್ ಕಾರ್ಖಾನೆಗಳಿದ್ದು, ಜಿಲ್ಲೆಯ ವಿವಿಧೆಡೆಯಿಂದ ಆಗಮಿಸುವ ಮಹಿಳಾ ಕಾರ್ಮಿಕರು ಆಟೋ, ದ್ವಿಚಕ್ರ ವಾಹನ ಸೇರಿದಂತೆ ಖಾಸಗಿ ವಾಹನಗಳಲ್ಲಿ ಆಗಮಿಸುತ್ತಿದ್ದಾರೆ. ಇದರಿಂದ ಮಹಿಳಾ ಕಾರ್ಮಿಕರು ತಾವು ಕಷ್ಟ ಪಟ್ಟು ದುಡಿದ ವೇತನದಲ್ಲಿ ಉಳಿತಾಯ ಮಾಡುವುದರ ಜೊತೆಗೆ ಸಂಸಾರ ನಡೆಸುವುದು ಸಹ ತುಂಬಾ ಕಷ್ಟಕರವಾಗುತ್ತಿದೆ.

ಹೀಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯು ಮಹಿಳಾ ಕಾರ್ಮಿಕರಿಗೆ ಉಚಿತ ಪ್ರಯಾಣವಾಗಿದ್ದು, ಮಂಡ್ಯ ನಗರದಿಂದ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶಕ್ಕೆ ಬೆಳಿಗ್ಗೆ ಮತ್ತು ಸಂಜೆ ವೇಳೆ 4 ಸಾರಿಗೆ ಬಸ್ ಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಮಹಿಳಾ ಕಾರ್ಮಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ಸರ್ಕಾರದ ಅನುದಾನಗಳ ಜೊತೆಗೆ ಸಿಎಸ್ಆರ್ ನಿಧಿಯನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರಿಂದ ಸ್ಥಳೀಯವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಬಹುದು ಹೀಗಾಗಿ ಕೈಗಾರಿಕೋದ್ಯಮಿಗಳು, ಕಂಪನಿಗಳು ಸಹ ಸ್ಥಳೀಯ ಸಂಸ್ಥೆಗಳ ಜೊತೆಗೆ ಕೈ ಜೋಡಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು.

ಶಾಹಿ ಎಕ್ಸ್ಪೋರ್ಟ್ ಪ್ರೈ ಲಿ ಈಗಾಗಲೇ ಪ್ರತಿ ವರ್ಷ ಸಿಎಸ್‌ಆರ್ ನಿಧಿ ಯೋಜನೆಯಡಿ ಸ್ಥಳೀಯವಾಗಿ ಅತ್ಯಾಧುನಿಕವುಳ್ಳ ಲೈಬ್ರರಿ, ಬಸ್ ನಿಲ್ದಾಣಗಳು, ಸೋಲಾರ್ ವಿದ್ಯುತ್ ಕಂಬಗಳು, ಶಾಲೆಗಳಿಗೆ ಕಂಪ್ಯೂಟರ್ ವಿತರಣೆ ಹಾಗೂ ಕೋವಿಡ್ ವೇಳೆ ಆಸ್ಪತ್ರೆಗಳಿಗೆ ಯಂತ್ರೋಪಕರಣಗಳು ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಗಳನ್ನು ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಮತ್ತಷ್ಟು ಸೌಲಭ್ಯಗಳನ್ನು ಒದಗಿಸಲಿ ಎಂದರು.

ಜಿಲ್ಲೆಯ ಕೆಲವು ಕಾರ್ಖಾನೆಗಳು ಸಿಎಸ್ಆರ್ ನಿಧಿಯನ್ನು ಸಮರ್ಪಕವಾಗಿ ಬಳಕೆ ಮಾಡದಿರುವುದು ಈಗಾಗಲೇ ನನ್ನ ಗಮನಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಅಂತಹ ಕಾರ್ಖಾನೆಗಳ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಇದೇ ವೇಳೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಲತಾ, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜ್, ಡಿವೈಎಸ್ಪಿ ಕೃಷ್ಣಪ್ಪ, ಸಿಪಿಐ ಶಿವಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಶಾಹಿ ಎಕ್ಸ್ಪೋರ್ಟ್ ಪ್ರೈ ಲಿ ಪ್ರಧಾನ ವ್ಯವಸ್ಥಾಪಕ ರಮೇಶ್ ಬಂಡಿ, ಸಂಪನ್ಮೂಲ ವಿಭಾಗದ ಅಧಿಕಾರಿಗಳಾದ ಶಿವಪ್ರಸಾದ್, ವಿಶ್ವನಾಥ್ ಸೇರಿದಂತೆ ಮತ್ತಿತರರು.

ವರದಿ : ಗಿರೀಶ್ ರಾಜ್, ಮಂಡ್ಯ

BREAKING: ಭ್ರಷ್ಟಾಚಾರ ಕೇಸ್: CBIನಿಂದ ನ್ಯಾಕ್ ಪರಿಶೀಲನಾ ಸಮಿತಿಯ ಅಧ್ಯಕ್ಷ ಸೇರಿ ಆರು ಸದಸ್ಯರ ಬಂಧನ

‘BMTC ನೌಕರ’ರಿಗೆ ಗುಡ್ ನ್ಯೂಸ್: 1.50 ಕೋಟಿ ‘ಅಪಘಾತ ವಿಮಾ ಪರಿಹಾರ’ಕ್ಕೆ ಸರ್ಕಾರ ಒಡಂಬಡಿಕೆ

Share. Facebook Twitter LinkedIn WhatsApp Email

Related Posts

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM1 Min Read

ರಾಜ್ಯದಲ್ಲಿ 40 ದಾಟಿದವರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಉಚಿತವಾಗಿ ಸಿಗಲಿದೆ ‘ಓದುವ ಕನ್ನಡಕ’!

03/04/2026 7:00 PM2 Mins Read

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM2 Mins Read
Recent News

ನಿಮ್ಮ ಟೂತ್‌ಪೇಸ್ಟ್ ಅಸಲಿಯೇ? ದೆಹಲಿಯಲ್ಲಿ ಬಯಲಾಯ್ತು ನಕಲಿ ‘ಸೆನ್ಸೋಡೈನ್’ ಫ್ಯಾಕ್ಟರಿ! ಬ್ರ್ಯಾಂಡೆಡ್ ಹೆಸರಿನಲ್ಲಿ ವಿಷಕಾರಿ ಕೆಮಿಕಲ್ ಮಾರಾಟ!

03/04/2026 8:15 PM

Watch Video: ಬೆಚ್ಚಿಬೀಳಿಸುವ ವಿಡಿಯೋ: ಗುಜರಾತ್‌ನಲ್ಲಿ ಸ್ಕೂಟಿ ಸವಾರನ ಮೇಲೆ ಮುಗಿಬಿದ್ದ ಅತಿ ಬಲಶಾಲಿ ಗೂಳಿ!

03/04/2026 8:09 PM

ಅಮೇರಿಕಾದ F-35 ಯುದ್ಧ ವಿಮಾನ ಹೊರಡೆದುರುಳಿಸಿದ ಇರಾನ್: ಖಚಿತಪಡಿಸಿದ ಯುಎಸ್, ಪೈಲಟ್ ಗಾಗಿ ಶೋಧ

03/04/2026 8:05 PM

ಭಾರತದ ಹೊಸ ಡಿಜಿಟಲ್ ನಿಯಮ 2026 ಜಾರಿ: ಸೋಶಿಯಲ್ ಮೀಡಿಯಾ ಮೇಲೆ ಸರ್ಕಾರದ ‘ಕಣ್ಣು’!

03/04/2026 8:02 PM
State News
KARNATAKA

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

By kannadanewsnow0903/04/2026 7:42 PM KARNATAKA 1 Min Read

ಬೆಂಗಳೂರು: ರಾಜ್ಯದ ಮಾಜಿ ಲೋಕಾಯುಕ್ತ ಹಾಗೂ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಅವರು ಶುಕ್ರವಾರ ಕಾರ್ಯಕ್ರಮವೊಂದರಲ್ಲಿ…

ರಾಜ್ಯದಲ್ಲಿ 40 ದಾಟಿದವರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಉಚಿತವಾಗಿ ಸಿಗಲಿದೆ ‘ಓದುವ ಕನ್ನಡಕ’!

03/04/2026 7:00 PM

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಅಂಕ ಕಡಿತ: ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ರಾಜ್ಯಪಾಲರ ಪತ್ರ

03/04/2026 6:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.