ಕೋಲಾರ: ಯುಪಿಎ ಸರ್ಕಾರ ಇದ್ದಾಗ ಮಹಿಳಾ ಮೀಸಲಾತಿಗೆ ಪೂರಕವಾಗಿ ಮನಮೋಹನ ಸಿಂಗ್, ಸೋನಿಯಾ ಗಾಂಧಿ ಸಾಕಷ್ಟು ಪ್ರಯತ್ನ ಮಾಡಿದ್ದರು.ಮಹಿಳಾ ಮೀಸಲಾತಿ ವಿಚಾರವಾಗಿ ಈ ಹಿಂದೆ ಯುಪಿಎ ಸರ್ಕಾರ ಇದ್ದಾಗಲೇ ಅಂಗೀಕಾರಕ್ಕೆ ಮುಂದಾಗಿದ್ದೆವು. ಆದರೆ ಕೆಲವರ ವಿರೋಧ ಇದ್ದ ಕಾರಣ ಅನುಮೋದನೆ ಸಿಗಲಿಲ್ಲ ಎಂದು ಆಹಾರ ಸಚಿವ ಕೆ ಎಚ್ ಮುನಿಯಪ್ಪ ಹೇಳಿದರು.
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ ವಿಚಾರವಾಗಿ ಕೋಲಾರದ ಕುರುಡುಮಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ವಿಚಾರ ಯುಪಿಎ ಸರ್ಕಾರ ಇದ್ದಾಗಲೇ ಚಿಂತನೆ ಮಾಡಿದ್ದೆವು. ಇದು ನಮ್ಮ ಕೂಸು. ಮಹಿಳಾ ಮೀಸಲಾತಿ ಕುರಿತಾಗಿ 10 ವರ್ಷಗಳ ಹಿಂದೆ ಚಿಂತನೆ ಮಾಡಿದ್ದೆವು. ಈಗ ಬಿಜೆಪಿ ಸರ್ಕಾರ ಮಾಡುತ್ತಿರುವುದರಲ್ಲಿ ವಿಶೇಷ ಏನೂ ಇಲ್ಲ ಎಂದು ತಿಳಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಮಾನದ ಹಕ್ಕು ಇರಬೇಕು ಎಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದರು. ಈ ದೇಶದಲ್ಲಿ ಮಹಿಳೆಯರು ಪುರುಷರು ಸಮಾನಾಗಿ ಬದುಕು ಬೇಕೆಂಬ ಗಾಂಧೀಜಿಯವರ ಕನಸು ಆಗಿತ್ತು. ಎಂದು ಹೇಳಿದರು.
ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದರು. ಅದರಂತೆ ದೇವನಹಳ್ಳಿಯಿಂದ ಸ್ಪರ್ಧೆ ಮಾಡಿದೆ, ಜನಾಶೀರ್ವಾದ ಸಿಕ್ಕು ಗೆಲುವು ಸಾಧಿಸಿದ ಹಿನ್ನೆಲೆ ಸಚಿವ ಸ್ಥಾನವೂ ದೊರಕಿದೆ. ಹೀಗಾಗಿ ಮುಂದೆ ಹೈಕಮಾಂಡ್ ಏನು ಹೇಳಿದ್ರೂ ಅದನ್ನು ಪಾಲನೆ ಮಾಡುತ್ತೇನೆ ಎಂದು ಮುನಿಯಪ್ಪ ತಿಳಿಸಿದರು.