Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಬರ ಬಂದಾಗ ಬರುವುದಿಲ್ಲ, ಚುನಾವಣಾ ಪ್ರಚಾರಕ್ಕೆ ಮಾತ್ರ ತಪ್ಪಿಸುವುದಿಲ್ಲ’ : ಪ್ರಧಾನಿ ಮೋದಿ ರಾಜ್ಯ ಪ್ರವಾಸಕ್ಕೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ
KARNATAKA

‘ಬರ ಬಂದಾಗ ಬರುವುದಿಲ್ಲ, ಚುನಾವಣಾ ಪ್ರಚಾರಕ್ಕೆ ಮಾತ್ರ ತಪ್ಪಿಸುವುದಿಲ್ಲ’ : ಪ್ರಧಾನಿ ಮೋದಿ ರಾಜ್ಯ ಪ್ರವಾಸಕ್ಕೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

By kannadanewsnow5714/04/2024 12:03 PM

ಬೆಂಗಳೂರು : ನೆರೆ ಬಂದಾಗ ಬರುವುದಿಲ್ಲ, ಬರ ಬಂದಾಗಲೂ ಬರುವುದಿಲ್ಲ, ಚುನಾವಣಾ ಪ್ರಚಾರಕ್ಕೆ ಬರುವುದನ್ನು ಮಾತ್ರ ತಪ್ಪಿಸುವುದಿಲ್ಲ. ಹೀಗಿದ್ದರೂ ನಿಮ್ಮ ಬರುವಿಕೆಗಾಗಿ ಆರುವರೆ ಕೋಟಿ ಕನ್ನಡಿಗರು ಕಾತರದಿಂದ ಕಾಯುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕಕ್ಕೆ ಸ್ವಾಗತ. ನೆರೆ ಬಂದಾಗ ಬರುವುದಿಲ್ಲ, ಬರ ಬಂದಾಗಲೂ ಬರುವುದಿಲ್ಲ, ಚುನಾವಣಾ ಪ್ರಚಾರಕ್ಕೆ ಬರುವುದನ್ನು ಮಾತ್ರ ತಪ್ಪಿಸುವುದಿಲ್ಲ. ಹೀಗಿದ್ದರೂ ನಿಮ್ಮ ಬರುವಿಕೆಗಾಗಿ ಆರುವರೆ ಕೋಟಿ ಕನ್ನಡಿಗರು ಕಾತರದಿಂದ ಕಾಯುತ್ತಿದ್ದಾರೆ. ಅವರಲ್ಲಿ ಒಂದಷ್ಟು ಪ್ರಶ್ನೆಗಳಿವೆ. ಆ ಪ್ರಶ್ನೆಗಳಿಗೆ ನಾಳೆಯ ನಿಮ್ಮ ಭಾಷಣದಲ್ಲಿ ನೀವು ಉತ್ತರ ನೀಡಬೇಕೆಂದು ಅವರ ಒತ್ತಾಯವಿದೆ. ಮೋದಿಯವರು ಬರಗಾಲದ ಕಷ್ಟಗಳಿಗೆ ನೆರವಾಗುತ್ತಾರೆ, ತೆರಿಗೆಯಲ್ಲಿ ಹೆಚ್ಚಿನ ಪಾಲು ಕೊಡುತ್ತಾರೆ. ವಿಶೇಷ ನೆರವಿನ ಭರವಸೆಯನ್ನು ಈಡೇರಿಸುತ್ತಾರೆ ಎನ್ನುವ ಅವರ ನಿರೀಕ್ಷೆಯನ್ನು ನಿಜ ಮಾಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿಯವರೇ ನಮ್ಮ ಕನ್ನಡಿಗ ಮತದಾರರು ನಿಮ್ಮ ಮೇಲೆ ಭರವಸೆ ಇಟ್ಟು ಮೊದಲ ಬಾರಿ ಹದಿನೇಳು, ಎರಡನೇ ಬಾರಿ ಇಪ್ಪತ್ತೈದು ಸಂಸದರನ್ನು ನಿಮ್ಮ ಪಕ್ಷದಿಂದ ಗೆಲ್ಲಿಸಿ ಲೋಕಸಭೆಗೆ ಕಳಿಸಿ ನಿಮ್ಮನ್ನು ಪ್ರಧಾನಮಂತ್ರಿ ಮಾಡಿದರು. ನಿಮ್ಮ ಮೇಲೆ ಇಷ್ಟೊಂದು ಪ್ರೀತಿ-ಅಭಿಮಾನ ತೋರಿದ ನಮ್ಮ ಮತದಾರರಿಗೆ ಕಳೆದ ಹತ್ತು ವರ್ಷಗಳಲ್ಲಿ ನೀವು ಮಾಡಿದ ಸಾಧನೆಯನ್ನು ತಿಳಿಸುವುದು ಬೇಡವೇ? ಈ ಬಾರಿಯಾದರೂ ಅದೇ ಹಳೆಯ ಹಿಂದು-ಮುಸ್ಲಿಮ್, ಭಾರತ -ಪಾಕಿಸ್ತಾನ, ಮಂದಿರ -ಮಸೀದಿ ಬಗೆಗಿನ ಟೇಪ್ ರೆಕಾರ್ಡರ್ ಪ್ಲೇ ಮಾಡುವುದನ್ನು ಕಡಿಮೆ ಮಾಡಿ ನಿಮ್ಮ ಹತ್ತು ವರ್ಷಗಳ ಸಾಧನೆಯ ಬಗ್ಗೆ ಹತ್ತು ನಿಮಿಷ ಮಾತನಾಡುತ್ತೀರಾ? ನಿರುದ್ಯೋಗ, ಬೆಲೆ ಏರಿಕೆ ಮತ್ತು ಭ್ರಷ್ಟಾಚಾರಗಳಿಗೆ ಸಂಬಂಧಿಸಿದಂತೆ ನಿಮ್ಮ ಸರ್ಕಾರದ ಮೇಲಿನ ಆರೋಪಗಳಿಗೆ ಉತ್ತರ ನೀಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ಚುನಾವಣಾ ಕಾಲದಲ್ಲಿ ರಾಜಕೀಯ ಪಕ್ಷಗಳು ಬಿಡುಗಡೆಗೊಳಿಸುವ ಪ್ರಣಾಳಿಕೆ ಎನ್ನುವುದು ಕೇವಲ ಭರವಸೆಗಳ ಕಂತೆ ಅಲ್ಲ, ಅದು ಮತದಾರನಿಗೆ ಕೊಡುವ ಗ್ಯಾರಂಟಿ. ಚುನಾವಣೆಯಲ್ಲಿ ಆಯ್ಕೆಯಾದ ಪಕ್ಷ ಐದು ವರ್ಷಗಳ ನಂತರ ಪ್ರಣಾಳಿಕೆಯಲ್ಲಿ ಈಡೇರಿಸಲಾದ ಭರವಸೆಯ ಲೆಕ್ಕವನ್ನು ಮತದಾರರಿಗೆ ಕೊಡಬೇಕು. ಈ ಕೆಲಸವನ್ನು ಒಬ್ಬ ಮುಖ್ಯಮಂತ್ರಿಯಾಗಿ ನಿಷ್ಠೆ ಮತ್ತು ಜವಾಬ್ದಾರಿಯಿಂದ ಮಾಡುತ್ತಾ ಬಂದ ನನಗೆ ನಿಮ್ಮ ವೈಫಲ್ಯವನ್ನು ಪ್ರಶ್ನಿಸುವ ನೈತಿಕ ಅಧಿಕಾರ ಇದೆ ಎಂದು ತಿಳಿದುಕೊಂಡಿದ್ದೇನೆ. ನೀವು ಹಿಂದಿನ ಚುನಾವಣೆಯ ಪ್ರಣಾಳಿಕೆಯ ಲೆಕ್ಕವನ್ನು ಕೊಟ್ಟಿಲ್ಲ, ಈ ಚುನಾವಣೆಯ ಪ್ರಣಾಳಿಕೆಯನ್ನು ಇನ್ನೂ ಬಿಡುಗಡೆಗೊಳಿಸಿಲ್ಲ. ಇದು ಮತದಾರರ ಬಗೆಗಿನ ನಿರ್ಲಕ್ಷ್ಯ ಮಾತ್ರವಲ್ಲ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಬಗೆಗಿನ ತಿರಸ್ಕಾರವೂ ಹೌದಲ್ಲವೇ? ಎಂದರು.

ಬರಪರಿಹಾರ ಮತ್ತು ತೆರಿಗೆ ಹಂಚಿಕೆಯಲ್ಲಿ ಆಗಿರುವ ಅನ್ಯಾಯಕ್ಕೆ ಸಂಬಂಧಿಸಿದಂತೆ ನಿಮ್ಮದೇ ಸರ್ಕಾರದ ಗೃಹ ಸಚಿವ Amit Shah ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿರ್ಲಜ್ಜತೆಯಿಂದ ಸುಳ್ಳುಗಳನ್ನು ಹೇಳಿಹೋಗಿದ್ದಾರೆ. ಕಳೆದ ವರ್ಷದ ಡಿಸೆಂಬರ್ 19ರಂದು ನಾನೇ ಖುದ್ದಾಗಿ ನಿಮ್ಮಲ್ಲಿಗೆ ಬಂದು ಬರಪರಿಹಾರ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದೆ. ಡಿಸೆಂಬರ್ 23ಕ್ಕೆ ತಮ್ಮ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿಯ ಸಭೆ ನಡೆಸಿ ತೀರ್ಮಾನಿಸುವುದಾಗಿ ಗೃಹಸಚಿವರೇ ಆಶ್ವಾಸನೆ ನೀಡಿದ್ದರು. ಹೀಗಿದ್ದರೂ ಬರಪರಿಹಾರ ಕೋರಿ ವಿಳಂಬವಾಗಿ ಮನವಿ ಮಾಡಿದ್ದೆವು ಎಂದು ಹೇಳುವುದು ಸುಳ್ಳಲ್ಲವೇ ಪ್ರಧಾನಿಗಳೇ?

ಕರ್ನಾಟಕ ಸರ್ಕಾರ ಬರಪರಿಹಾರ ಕೋರಿ ವಿಳಂಬವಾಗಿ ಮನವಿ ಸಲ್ಲಿಸಿರುವ ಕಾರಣದಿಂದಾಗಿ ಚುನಾವಣಾ ಆಯೋಗ ಪರಿಹಾರ ಬಿಡುಗಡೆಗೆ ಅನುಮತಿ ನೀಡಿಲ್ಲ ಎಂದು ಹಣಕಾಸು ಸಚಿವೆ Nirmala Sitharaman ಹೇಳಿದ್ದಾರೆ. ಬರಪರಿಹಾರ ಕೋರಿ ನಮ್ಮ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದು ಕಳೆದ ವರ್ಷದ ಸೆಪ್ಟೆಂಬರ್ 23ರಂದು, ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು ಮಾರ್ಚ್ 16ರಂದು. ರಾಜ್ಯ ಸರ್ಕಾರದ ಒಂದು ಮನವಿ ಪತ್ರವನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳಲು ಐದು ತಿಂಗಳು ಬೇಕೇ ಪ್ರಧಾನಿಗಳೇ? ಇದೇನಾ ನೀವು ಹೇಳುವ “Less Government , More Governance?” ಎಂದು ಹೇಳಿದ್ದಾರೆ.

ತೆರಿಗೆ ಹಂಚಿಕೆಯಲ್ಲಿ ನಮ್ಮ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ನಾವು ದನಿ ಎತ್ತಿದರೆ ನಮ್ಮದು ದೇಶದ್ರೋಹ ಎನ್ನುತ್ತೀರಿ? ಹಾಗಿದ್ದರೆ ಇದೇ ತೆರಿಗೆ ಹಂಚಿಕೆಯಲ್ಲಿನ ತಾರತಮ್ಯದ ಬಗ್ಗೆ ಗುಜರಾತ್ ಮುಖ್ಯಮಂತ್ರಿಯಾಗಿ ಮೊದಲು ದನಿ ಎತ್ತಿದ್ದ ನೀವೂ ದೇಶದ್ರೋಹಿ ಅಲ್ಲವೇ? ಕೇಂದ್ರ Bharatiya Janata Party (BJP) ಸರ್ಕಾರಕ್ಕೆ ನಾವು 60,000 ಕೋಟಿ ರೂಪಾಯಿ ಕೊಡುತ್ತೇವೆ ಅದರಲ್ಲಿ ಶೇಕಡಾ 2.5ರಷ್ಟು ಮಾತ್ರ ವಾಪಸು ನೀಡಲಾಗುತ್ತದೆ. ಗುಜರಾತ್ ಭಿಕ್ಷುಕ ರಾಜ್ಯವೇ? ಎಂದು ಮುಲಾಜಿಲ್ಲದೆ ಪ್ರಶ್ನಿಸಿದ್ದವರು ನೀವೇ ಅಲ್ಲವೇ?

ಜಾತಿ, ಧರ್ಮ, ಭಾಷೆ, ಪ್ರದೇಶವನ್ನು ಮೀರಿದ್ದು ಪ್ರಧಾನಿ ಪಟ್ಟ. ಆದರೆ ನೀವು ಕನ್ನಡ-ಕನ್ನಡಿಗ-ಕರ್ನಾಟಕದ ವಿರೋಧಿ ಎನ್ನುವ ಅಭಿಪ್ರಾಯ ಕನ್ನಡಿಗರಲ್ಲಿದ್ದರೆ ಅದಕ್ಕೆ ನೀವೇ ಹೊಣೆ ಅಲ್ಲವೇ? ಕರ್ನಾಟಕದ ನೆಲ, ಜಲ, ಭಾಷೆ ಬಗ್ಗೆ ನಾವು ಮಾತನಾಡಿದರೆ ದೇಶದ್ರೋಹ ಎನ್ನುತ್ತೀರಿ. ಕನ್ನಡದ ಮೇಲೆ ಹಿಂದಿ ಹೇರುವ ಹುನ್ನಾರವನ್ನು ಪ್ರತಿಭಟಿಸಿದರೆ, ಕನ್ನಡಕ್ಕೊಂದು ಧ್ವಜ ಕೇಳಿದರೆ, ನಮ್ಮ ರಾಜ್ಯದ ಮಕ್ಕಳಿಗೆ ಮಾತೃಭಾಷೆಯಲ್ಲಿಯೇ ಕೇಂದ್ರ ಸರ್ಕಾರದ ಸ್ವಾಮ್ಯದ ಸಂಸ್ಥೆಗಳ ನೇಮಕಾತಿಯ ಪರೀಕ್ಷೆ ಬರೆಯಲು ಅವಕಾಶ ಕೇಳಿದರೆ ದೇಶದ್ರೋಹ ಎನ್ನುತ್ತೀರಿ. ವಿಶ್ವಗುರು ಎಂದು ಕರೆಸಿಕೊಳ್ಳುವ ನೀವು ವಿಶ್ವಮಾನವರಾಗುವುದು ಯಾವಾಗ?

ಮೈಸೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ನಾಳೆ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದೀರಿ. ಆ ಕ್ಷೇತ್ರಗಳಲ್ಲಿ ಲೋಕಸಭಾ ಸದಸ್ಯರಾಗಿದ್ದ ನಿಮ್ಮ ಇಬ್ಬರು ಶಿಷ್ಯರಿಗೆ ಈ ಬಾರಿ ನೀವು ಟಿಕೆಟ್ ನಿರಾಕರಿಸಿದ್ದು ಎಲ್ಲರನ್ನೂ ಅಚ್ಚರಿಯಲ್ಲಿ ಕೆಡವಿದೆ. ಈ ಟಿಕೆಟ್ ನಿರಾಕರಣೆಗೆ ಕಾರಣಗಳನ್ನು ನಿಮ್ಮ ಪಕ್ಷದವರೇ ಕತೆ ಕಟ್ಟಿ ಹೇಳುತ್ತಿದ್ದಾರೆ. ನಿಜವಾದ ಕಾರಣಗಳೇನು ಎನ್ನುವುದನ್ನು ನೀವೇ ಸ್ಪಷ್ಟಪಡಿಸುತ್ತೀರಾ? ಎಂದಿದ್ದಾರೆ.

'Won't come when drought comes ‘ಬರ ಬಂದಾಗ ಬರುವುದಿಲ್ಲ won't miss election campaigning': Siddaramaiah on PM Modi's visit to the state ಚುನಾವಣಾ ಪ್ರಚಾರಕ್ಕೆ ಮಾತ್ರ ತಪ್ಪಿಸುವುದಿಲ್ಲ’ : ಪ್ರಧಾನಿ ಮೋದಿ ರಾಜ್ಯ ಪ್ರವಾಸಕ್ಕೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ
Share. Facebook Twitter LinkedIn WhatsApp Email

Related Posts

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM2 Mins Read

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM1 Min Read

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM1 Min Read
Recent News

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM
State News
KARNATAKA

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

By kannadanewsnow0506/07/2025 7:41 PM KARNATAKA 2 Mins Read

ಧಾರವಾಡ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಸಹೋದರನಿಗೆ ಬಹಳಷ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರ ಬೆರಳಿಂದ ಉಗುರು…

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.