Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಒಂದೇ ದಿನಕ್ಕೆ ಸೊರಬದ ಉಳವಿಯಿಂದ ಅಂಬಲಿಗೋಳ ತಲುಪಿದ ಕಾಡಾನೆ, ನಾಳೆ ಶೆಟ್ಟಿಹಳ್ಳಿ ಕಡೆಗೆ ಕಾರ್ಯಾಚರಣೆ

13/12/2025 10:18 PM

Good News ; ಉದ್ಯೋಗಿಗಳಿಗೆ ಶುಭ ಸುದ್ದಿ ; ಖಾತೆಗೆ 52 ಸಾವಿರ ರೂ. ಜಮಾ.?

13/12/2025 10:00 PM

ಹಗಲಿನಲ್ಲಿ ‘ನಿದ್ದೆ’ ಮಾಡಿದ್ರೆ ಏನಾಗುತ್ತೆ.? ಒಂದು ಸಣ್ಣ ನಿದ್ರೆಯಿಂದ ಇಷ್ಟೆಲ್ಲಾ ಆಗಲು ಸಾಧ್ಯವೇ.?

13/12/2025 9:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಕಾರ್ಮಿಕರೇ ಎಚ್ಚರ : ಕೆಲ ಕಂಪ್ಯೂಟರ್ ಸೆಂಟರ್ ಗಳಲ್ಲಿ ನಕಲಿ ‘ಲೇಬರ್ ಕಾರ್ಡ್’ ವಿತರಣೆ.!
KARNATAKA

ರಾಜ್ಯದ ಕಾರ್ಮಿಕರೇ ಎಚ್ಚರ : ಕೆಲ ಕಂಪ್ಯೂಟರ್ ಸೆಂಟರ್ ಗಳಲ್ಲಿ ನಕಲಿ ‘ಲೇಬರ್ ಕಾರ್ಡ್’ ವಿತರಣೆ.!

By kannadanewsnow5730/11/2024 12:28 PM

ಶಿವಮೊಗ್ಗ :  ಜಿಲ್ಲೆಯಲ್ಲಿ ಕೆಲವು ಕಂಪ್ಯೂಟರ್ ಸೆಂಟರ್‌ಗಳಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ನೀಡುತ್ತಿರುವ ಗುರುತಿನ ಚೀಟಿಗಳನ್ನೇ ಎಡಿಟ್ ಮಾಡಿ ಕಾರ್ಮಿಕರಿಗೆ ಲೇಬರ್ ಕಾರ್ಡ್ಗಳನ್ನು ಮಾಡಿಕೊಡುತ್ತೇವೆಂದು ಹೇಳಿ ಕಾರ್ಮಿಕರನ್ನು ವಂಚಿಸಿ, ನಕಲಿ ಕಾರ್ಮಿಕರ ಗುರುತಿನ ಚೀಟಿ ನೀಡುತ್ತಿದ್ದು ಇದು ಅಪರಾಧವಾಗಿದೆ. ಕಾರ್ಮಿಕರು ಇಂತಹವರಿಂದ ಮೋಸ ಹೋಗಬಾರದೆಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಫಲಾನುಭವಿಗಳನ್ನಾಗಿ ನೋಂದಾಯಿಸಲು ಕಾರ್ಮಿಕ ನಿರೀಕ್ಷಕರುಗಳನ್ನು ನೋಂದಣಿ ಅಧಿಕಾರಿಯಾಗಿ ನೇಮಕ ಮಾಡಲಾಗಿರುತ್ತದೆ.

ಆ ಪ್ರಕಾರ ಶಿವಮೊಗ್ಗ ಜಿಲ್ಲೆಯಾದ್ಯಂತ ಪ್ರತಿ ತಾಲ್ಲೂಕಿನಲ್ಲಿಯು ಕಾರ್ಮಿಕ ನಿರೀಕ್ಷಕರುಗಳು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರನ್ನು ನೋಂದಣಿ ಮಾಡಿ ಗುರುತಿನ ಚೀಟಿ (ಲೇಬರ್ ಕಾರ್ಡ್) ಗಳನ್ನು ನೀಡುತ್ತಿದ್ದಾರೆ.

ಆದರೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಕಂಪ್ಯೂಟರ್ ಸೆಂಟರ್‌ಗಳಲ್ಲಿ ಶಿವಮೊಗ್ಗ ಜಿಲ್ಲೆಯ ಕಾರ್ಮಿಕ ನಿರೀಕ್ಷಕರುಗಳ ಕಛೇರಿಗಳಲ್ಲಿ ನೋಂದಣಿ ಮಾಡಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ನೀಡುತ್ತಿರುವ ಗುರುತಿನ ಚೀಟಿಗಳನ್ನೇ ಎಡಿಟ್ ಮಾಡಿ ಕಾರ್ಮಿಕರಿಗೆ ಲೇಬರ್ ಕಾರ್ಡ್ಗಳನ್ನು ಮಾಡಿಕೊಡುತ್ತೇವೆಂದು ಹೇಳಿ ಕಾರ್ಮಿಕರನ್ನು ವಂಚಿಸಿ ಅವರಿಂದ ಕಾನೂನುಬಾಹಿರವಾಗಿ ಹೆಚ್ಚಿನ ಹಣವನ್ನು ಸಂಗ್ರಹ ಮಾಡಿ ನಕಲಿ ಕಾರ್ಡ್ ಗಳನ್ನು ಲೇಬರ್ ಕಾರ್ಡ್ಗಳೆಂದು ತಯಾರಿಸಿ ನೀಡುತ್ತಿರುವುದು ಈ ಕಛೇರಿಯ ಗಮನಕ್ಕೆ ಬಂದಿರುತ್ತದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು, ಅಂತಹ ಕಾರ್ಡ್ಗಳಿಗೆ ಯಾವುದೇ ಮಾನ್ಯತೆ ಇರುವುದಿಲ್ಲ ಹಾಗೂ ಇಲಾಖೆಯಿಂದ ಯಾವುದೇ ಸೌಲಭ್ಯಗಳು ಸಹ ದೊರೆಯುವುದಿಲ್ಲ.

ಆದ ಕಾರಣ ಅಂತಹವರ ಬಗ್ಗೆ ಮಾಹಿತಿ ತಿಳಿದುಬಂದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿಗೆ ಅಥವಾ ಆಯಾಯ ತಾಲ್ಲೂಕುಗಳ ಕಾರ್ಮಿಕ ನಿರೀಕ್ಷಕರುಗಳ ಕಛೇರಿಗೆ ಮಾಹಿತಿಯನ್ನು ನೀಡುವುದರ ಮೂಲಕ ನಿಜವಾದ ಕಾರ್ಮಿಕರು ವಂಚನೆಗೊಳಗಾಗುವುದನ್ನು ತಪ್ಪಿಸಲು ಸಹಕರಿಸಬೇಕು.

ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರನ್ನು ನೋಂದಣಿ ಮಾಡಿ ಗುರುತಿನ ಚೀಟಿ (ಲೇಬರ್ ಕಾರ್ಡ್)ಗಳನ್ನು ನೀಡುವ ನೋಂದಣಿ ಅಧಿಕಾರಿಗಳು ಶಿವಮೊಗ್ಗ ಜಿಲ್ಲೆಯ ಆಯಾಯ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರುಗಳಾಗಿದ್ದು, ಹೊಸದಾಗಿ ಲೇಬರ್ ಕಾರ್ಡ್ ಮಾಡಿಸುವ ಫಲಾನುಭವಿಗಳು ಸಿಎಸ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ‘ಸ್ವೀಕೃತಿ ಪತ್ರ’ ಲಭ್ಯವಾಗುತ್ತದೆ. ತದನಂತರ ಕಾರ್ಮಿಕ ನಿರೀಕ್ಷಕರು ಕಾಲಮಿತಿಯೊಳಗೆ ಸ್ಥಳ ಪರಿಶೀಲನೆ ನಡೆಸಿ ಕಾರ್ಮಿಕ ಕಾರ್ಡ್ ಅನ್ನು ಅನುಮೋದನೆ ಮಾಡುತ್ತಾರೆ. ಅದರ ಆಧಾರದ ಮೇಲೆ ಫಲಾನುಭವಿಗಳು ಸಿಎಸ್‌ಸಿ ಸೆಂಟರ್‌ಗಳಲ್ಲಿ ಕಾರ್ಮಿಕ ಕಾರ್ಡ್ಗಳನ್ನು ಪಡೆಯಬಹುದಾಗಿರುತ್ತದೆ. ಇದರ ಹೊರತು ಬೇರೆ ಯಾವುದೇ ಕಂಪ್ಯೂಟರ್ ಸೆಂಟರ್ ಮತ್ತು ಇನ್ನಿತರ ಕಛೇರಿಗಳಲ್ಲಿ ಕಾರ್ಡ್ಗಳನ್ನು ನೋಂದಣಿ ಮಾಡಿ ನೀಡಲಾಗುವದಿಲ್ಲವೆಂಬುದನ್ನು ಎಲ್ಲರೂ ಮನಗಾಣಬೇಕೆಂದು ಈ ವಿಷಯದಲ್ಲಿ ಯಾರು ಸಹ ಮೋಸಹೋಗಬಾರದೆಂದು ಶಿವಮೊಗ್ಗ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಎಂ.ಪಿ ವೇಣುಗೋಪಾಲ್ ರವರು ತಿಳಿಸಿರುತ್ತಾರೆ.

warning against being cheated Workers should note: Fake 'labour card' through computer centre ಕಾರ್ಮಿಕರೇ ಗಮನಿಸಿ : ಕಂಪ್ಯೂಟರ್ ಸೆಂಟರ್ ಮೂಲಕ ನಕಲಿ `ಲೇಬರ್ ಕಾರ್ಡ್' ಮೋಸ ಹೋಗದಂತೆ ಎಚ್ಚರಿಕೆ
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಒಂದೇ ದಿನಕ್ಕೆ ಸೊರಬದ ಉಳವಿಯಿಂದ ಅಂಬಲಿಗೋಳ ತಲುಪಿದ ಕಾಡಾನೆ, ನಾಳೆ ಶೆಟ್ಟಿಹಳ್ಳಿ ಕಡೆಗೆ ಕಾರ್ಯಾಚರಣೆ

13/12/2025 10:18 PM3 Mins Read

ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಸಚಿವ ಎಂ.ಬಿ.ಪಾಟೀಲ್ ಘೋಷಣೆ

13/12/2025 8:45 PM2 Mins Read

ಶಾಸಕ ಇಕ್ಬಾಲ್ ಮಾತನ್ನು ಗಂಭೀರವಾಗಿ ಪರಿಗಣಿಸಬೇಡಿ: ಡಿಸಿಎಂ ಡಿ.ಕೆ ಶಿವಕುಮಾರ್

13/12/2025 8:37 PM2 Mins Read
Recent News

ಶಿವಮೊಗ್ಗ: ಒಂದೇ ದಿನಕ್ಕೆ ಸೊರಬದ ಉಳವಿಯಿಂದ ಅಂಬಲಿಗೋಳ ತಲುಪಿದ ಕಾಡಾನೆ, ನಾಳೆ ಶೆಟ್ಟಿಹಳ್ಳಿ ಕಡೆಗೆ ಕಾರ್ಯಾಚರಣೆ

13/12/2025 10:18 PM

Good News ; ಉದ್ಯೋಗಿಗಳಿಗೆ ಶುಭ ಸುದ್ದಿ ; ಖಾತೆಗೆ 52 ಸಾವಿರ ರೂ. ಜಮಾ.?

13/12/2025 10:00 PM

ಹಗಲಿನಲ್ಲಿ ‘ನಿದ್ದೆ’ ಮಾಡಿದ್ರೆ ಏನಾಗುತ್ತೆ.? ಒಂದು ಸಣ್ಣ ನಿದ್ರೆಯಿಂದ ಇಷ್ಟೆಲ್ಲಾ ಆಗಲು ಸಾಧ್ಯವೇ.?

13/12/2025 9:32 PM

BREAKING : ಹೈದರಾಬಾದ್’ನಲ್ಲಿ ‘ಮೆಸ್ಸಿ’ ಭೇಟಿಯಾದ ‘ರಾಹುಲ್ ಗಾಂಧಿ’, ಅರ್ಜೆಂಟೀನಾ ತಾರೆಯ ಭಾರತ ಪ್ರವಾಸದಲ್ಲಿ ಭಾಗಿ

13/12/2025 9:01 PM
State News
KARNATAKA

ಶಿವಮೊಗ್ಗ: ಒಂದೇ ದಿನಕ್ಕೆ ಸೊರಬದ ಉಳವಿಯಿಂದ ಅಂಬಲಿಗೋಳ ತಲುಪಿದ ಕಾಡಾನೆ, ನಾಳೆ ಶೆಟ್ಟಿಹಳ್ಳಿ ಕಡೆಗೆ ಕಾರ್ಯಾಚರಣೆ

By kannadanewsnow0913/12/2025 10:18 PM KARNATAKA 3 Mins Read

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಹೋಬಳಿಯ ದೂಗೂರು ಅರಣ್ಯದಲ್ಲಿ ಕೆಲ ದಿನಗಳಿಂದ ಬೀಡು ಬಿಟ್ಟಿದ್ದಂತ ಜೋಡಿ ಕಾಡಾನೆಗಳನ್ನು, ಒಂದೇ…

ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಸಚಿವ ಎಂ.ಬಿ.ಪಾಟೀಲ್ ಘೋಷಣೆ

13/12/2025 8:45 PM

ಶಾಸಕ ಇಕ್ಬಾಲ್ ಮಾತನ್ನು ಗಂಭೀರವಾಗಿ ಪರಿಗಣಿಸಬೇಡಿ: ಡಿಸಿಎಂ ಡಿ.ಕೆ ಶಿವಕುಮಾರ್

13/12/2025 8:37 PM

‘ಹಿರಿಯ ಪತ್ರಕರ್ತ ಅ.ಚ.ಶಿವಣ್ಣ’ಗೆ KUWJ ಶ್ರದ್ಧಾಂಜಲಿ: ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶ್ಲಾಘನೆ

13/12/2025 8:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.