Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

KSRTCಗೆ ಎಕ್ಸಲೆನ್ಸ್ ಅವಾರ್ಡ್ಸ್ 2025ರ ಕಾರ್ಯಕ್ರಮದಲ್ಲಿ 9 ವಿಭಾಗಗಳಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ

27/09/2025 11:00 PM

ಶಿವಮೊಗ್ಗ: ಸಾಗರದ ಕೆಳದಿ ಮಠದಲ್ಲಿ ವಿಜಯ ದಶಮಿ ದಿನದಂದು ಪಚ್ಚೆಲಿಂಗ ದರ್ಶನಕ್ಕೆ ಭಕ್ತರಿಗೆ ಅವಕಾಶ

27/09/2025 10:21 PM

ಪ್ರತಿಭಾವಂತ ವಿದ್ಯಾರ್ಥಿಗಳು ಸಮಾಜದ ಆಸ್ತಿ: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ

27/09/2025 10:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » World Blood Donor Day : ಇಂದು ʻವಿಶ್ವ ರಕ್ತದಾನಿಗಳ ದಿನʼ: ಈ ದಿನದ ಇತಿಹಾಸ, ಮಹತ್ವ, ಥೀಮ್ ತಿಳಿಯಿರಿ
INDIA

World Blood Donor Day : ಇಂದು ʻವಿಶ್ವ ರಕ್ತದಾನಿಗಳ ದಿನʼ: ಈ ದಿನದ ಇತಿಹಾಸ, ಮಹತ್ವ, ಥೀಮ್ ತಿಳಿಯಿರಿ

By kannadanewsnow5714/06/2025 8:42 AM

ಇಂದು ಜೂನ್ 14 ರಂದು, ‘ವಿಶ್ವ ರಕ್ತದಾನ ದಿನ’ವನ್ನು ಪ್ರಪಂಚದಾದ್ಯಂತ ಆಚರಿಸಲಾಗುತ್ತಿದೆ. ಇದನ್ನು ವಿಶ್ವ ಆರೋಗ್ಯ ಸಂಸ್ಥೆ (WHO) ಘೋಷಿಸಿದೆ. ಯಾವುದೇ ಸ್ವಾರ್ಥವಿಲ್ಲದೆ ಇತರರ ಜೀವಗಳನ್ನು ಉಳಿಸಲು ರಕ್ತದಾನ ಮಾಡುವ ಎಲ್ಲಾ ರಕ್ತದಾನಿಗಳ ಗೌರವಾರ್ಥವಾಗಿ ಈ ದಿನವನ್ನು ಸಮರ್ಪಿಸಲಾಗಿದೆ.

ವಿಶ್ವ ರಕ್ತದಾನಿಗಳ ದಿನದ ಇತಿಹಾಸ

WHO ವೆಬ್‌ಸೈಟ್ ಪ್ರಕಾರ, ವಿಶ್ವ ರಕ್ತದಾನ ದಿನವನ್ನು ಆಚರಿಸುವ ಉಪಕ್ರಮವನ್ನು ಮೊದಲ ಬಾರಿಗೆ 2004 ರಲ್ಲಿ ತೆಗೆದುಕೊಳ್ಳಲಾಯಿತು. WHO, ಅಂತರರಾಷ್ಟ್ರೀಯ ರಕ್ತದಾನ ಸಂಸ್ಥೆಗಳ ಒಕ್ಕೂಟ ಮತ್ತು ಅಂತರರಾಷ್ಟ್ರೀಯ ರಕ್ತ ವರ್ಗಾವಣೆ ಸಂಘವು ಜೂನ್ 14 ರಂದು ರಕ್ತದಾನಿಗಳ ದಿನವನ್ನು ಆಚರಿಸಿತು.

ಜೂನ್ 14 ಡಾ. ಕಾರ್ಲ್ ಲ್ಯಾಂಡ್‌ಸ್ಟೈನರ್ ಅವರ ಜನ್ಮದಿನವಾಗಿದೆ. ಈ ದಿನವನ್ನು ಡಾ. ಕಾರ್ಲ್ ಅವರಿಗೆ ಸಮರ್ಪಿಸಲಾಗಿದೆ ಎಂದು ಹೇಳಲಾಗುತ್ತದೆ, ಏಕೆಂದರೆ ಅವರು ರಕ್ತ ಗುಂಪು ವ್ಯವಸ್ಥೆಯನ್ನು (A, B, AB, O) ಕಂಡುಹಿಡಿದವರು. ಇದು ರಕ್ತದಾನ ಮತ್ತು ಒಬ್ಬ ವ್ಯಕ್ತಿಯಿಂದ ಇನ್ನೊಬ್ಬರಿಗೆ ರಕ್ತ ವರ್ಗಾವಣೆಯ ಕ್ಷೇತ್ರದಲ್ಲಿ ಪ್ರಮುಖ ಕೊಡುಗೆಯಾಗಿದೆ. ಕಾರ್ಲ್ ಲ್ಯಾಂಡ್‌ಸ್ಟೈನರ್ ಅವರ ಕೊಡುಗೆಗಾಗಿ 1930 ರಲ್ಲಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಯಿತು.

ಈ ವರ್ಷದ ಧ್ಯೇಯವಾಕ್ಯವೇನು?

WHO ಪ್ರಕಾರ, ಈ ವರ್ಷದ ಧ್ಯೇಯವಾಕ್ಯವೆಂದರೆ ‘ರಕ್ತ ನೀಡಿ, ಭರವಸೆ ನೀಡಿ, ಒಟ್ಟಿಗೆ ಜೀವಗಳನ್ನು ಉಳಿಸಿ’. ಈ ವರ್ಷದ ಧ್ಯೇಯವಾಕ್ಯವು ನಿಮ್ಮ ಒಂದು ಹೆಜ್ಜೆ ಯಾರೊಬ್ಬರ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಒತ್ತಿಹೇಳುತ್ತದೆ. ಪ್ರತಿಯೊಂದು ದಾನವು ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಭರವಸೆಯನ್ನು ತರುತ್ತದೆ. ಗಂಭೀರ ಕಾಯಿಲೆಗಳಿಂದ ತಮ್ಮ ಜೀವಗಳನ್ನು ಉಳಿಸಲು ಅವರು ಪ್ರತಿ ಕ್ಷಣವೂ ಹೋರಾಡುತ್ತಿದ್ದಾರೆ.

ಜಾಗತಿಕವಾಗಿ ವಾರ್ಷಿಕವಾಗಿ ಸುಮಾರು 118.54 ಮಿಲಿಯನ್ (ಸುಮಾರು 11 ಕೋಟಿ 85 ಲಕ್ಷ) ರಕ್ತದಾನಗಳನ್ನು ಮಾಡಲಾಗುತ್ತದೆ ಎಂದು WHO ಹೇಳುತ್ತದೆ. ಒಟ್ಟು 169 ದೇಶಗಳಲ್ಲಿ ಸುಮಾರು 13,300 ರಕ್ತ ಕೇಂದ್ರಗಳು 106 ಮಿಲಿಯನ್ (10 ಕೋಟಿ 60 ಲಕ್ಷ) ರಕ್ತದಾನಗಳನ್ನು ಸಂಗ್ರಹಿಸುತ್ತಿವೆ ಎಂದು ವರದಿ ಮಾಡಿದೆ.

ಮಹತ್ವ :
• ರಕ್ತಕ್ಕೆ ಪರ್ಯಾಯವಾದ ವಸ್ತುವಿಲ್ಲ.
• ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ.
• ರಕ್ತವನ್ನು ಮನುಷ್ಯರ ದಾನದಿಂದ ಮಾತ್ರ ಪಡೆಯಬಹುದು.
• ರಕ್ತದಾನ ಮಾಡುವುದು ಪ್ರತೀ ಆರೋಗ್ಯವಂತ ವ್ಯಕ್ತಿಯ ಕರ್ತವ್ಯವೆಂದು ಭಾವಿಸಿ ಆಗಾಗ ರಕ್ತದಾನ ಮಾಡಿದಲ್ಲಿ ಮಾತ್ರ ರೋಗಗ್ರಸ್ಥರು ಮತ್ತು ಗಾಯಗೊಂಡವರನ್ನು ಬದುಕಿಸಲು ಸಾಧ್ಯ.
• ರಕ್ತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ, ದಾನಿಯ ದೇಹದಲ್ಲಿ ರಕ್ತದ ಉತ್ಪತ್ತಿ ಪ್ರಾರಂಭವಾಗಿ 24 ಗಂಟೆಯ ಒಳಗಾಗಿ ದಾನ ಮಾಡಿದ ಪ್ರಮಾಣದ ರಕ್ತ ದೇಹದಲ್ಲಿ ಪುನರುತ್ಪತ್ತಿಯಾಗುತ್ತದೆ.
• ಒಂದೆರಡು ವಾರಗಳಲ್ಲಿ ರಕ್ತದ ಎಲ್ಲಾ ಆಂಶಗಳು ದಾನಿಯ ರಕ್ತದಲ್ಲಿ ಸಂಪೂರ್ಣವಾಗಿ ತುಂಬಿಕೊಳ್ಳುತ್ತದೆ.
• ರಕ್ತದಾನ ಮಾಡುವಾಗ ಒಂದು ಚುಚ್ಚುಮದ್ದು ತೆಗೆದುಕೊಳ್ಳುವಾಗ ಆಗುವುದಕ್ಕಿಂತ ಹೆಚ್ಚು ನೋವು ಆಗುವುದಿಲ್ಲ.
• ರಕ್ತದಾನ ಮಾಡಲು ಮತ್ತು ಸುಧಾರಿಸಿಕೊಳ್ಳಲು, ಒಟ್ಟು ಸೇರಿ 20 ನಿಮಿಷಕ್ಕೂ ಹೆಚ್ಚಿನ ಸಮಯ ಬೇಕಾಗಿಲ್ಲ.
ಯಾರು ರಕ್ತದಾನ ಮಾಡಬಹುದು?
• ಹೆಣ್ಣು ಗಂಡೆಂಬ ಬೇಧವಿಲ್ಲದೇ 18 ರಿಂದ 60 ವರ್ಷದ ಒಳಗಿರುವ ಎಲ್ಲಾ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು.
• ಗಂಡಸರು 3 ತಿಂಗಳಿಗೊಮ್ಮೆ ಮತ್ತು ಹೆಂಗಸರು 4 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.
• ದಾನಿಯ ದೇಹದ ತೂಕ 45 ಕೆ.ಜಿ ಗಿಂತ ಹೆಚ್ಚಿರಬೇಕು.
• ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶ 12.5 ಗ್ರಾಂ ಗಿಂತ ಹೆಚ್ಚಿರಬೇಕು.

ಯಾರು ರಕ್ತ ದಾನ ಮಾಡಬಾರದು?

ಯಾವದಾದರೂ ಕಾಯಿಲೆಯಿಂದ ನರಳುತ್ತಿದ್ದರೆ ಅಥವಾ ಅನಾರೋಗ್ಯದಿಂದ ಬಳಲುತ್ತಿದ್ದರೆ ರಕ್ತದಾನ ಮಾಡಬಾರದು. ಮಧ್ಯಪಾನ ಹಾಗೂ ಮಾದಕ ದ್ರವ್ಯ ಸೇವನೆ ಮಾಡಿದಾಗ ರಕ್ತದಾನ ಮಾಡಬಾರದು. ಮಹಿಳೆಯರು, ತಿಂಗಳ ಮುಟ್ಟಿನ ಸಮಯದಲ್ಲಿ ಗರ್ಭಿಣಿಯರಾಗಿದ್ದಾಗ, ಎದೆಹಾಲುಣಿಸುತ್ತಿರುವಾಗ ಮತ್ತು ಹೆರಿಗೆಯ ನಂತರ 6 ತಿಂಗಳು ರಕ್ತದಾನ ಮಾಡಬಾರದು.

ಯಾವುದೇ ವ್ಯಕ್ತಿ ಕಾಯಿಲೆಯ ವಿರುದ್ಧ ಲಸಿಕೆ ಪಡೆದಿದ್ದರೆ, ಅಂತಹವರು ಲಸಿಕೆ ಪಡೆದ 4 ವಾರಗಳವರೆಗೆ ರಕ್ತದಾನ ಮಾಡಬಾರದು. ಮಲೇರಿಯಾ ರೋಗಕ್ಕೆ ಚಿಕಿತ್ಸೆ ಪಡೆದಿದ್ದರೆ, ಚಿಕಿತ್ಸೆ ಪಡೆದ ನಂತರದ ಮೂರು ತಿಂಗಳು ರಕ್ತದಾನ ಮಾಡಬಾರದು. ಆಸ್ಪರಿನ್ ಸೇವಿಸಿದ್ದರೆ, ಅಂತಹ ವ್ಯಕ್ತಿ ಮಾತ್ರೆ ಸೇವಿಸಿದ ನಂತರ ಮೂರು ದಿನ ರಕ್ತದಾನ ಮಾಡಬಾರದು.

ಹಿಂದಿನ 3 ತಿಂಗಳಲ್ಲಿ ತಾವೇ ಯಾವುದೇ ರಕ್ತ ಅಥವಾ ರಕ್ತದ ಅಂಶ ಪಡೆದಿದ್ದರೆ ಅಂತಹವರು ರಕ್ತದಾನ ಮಾಡಬಾರದು. ಯಾವುದೇ ದೊಡ್ಡ ಪ್ರಮಾಣದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರೆ ಅಂತಹವರು ಮುಂದಿನ 6 ತಿಂಗಳವರೆಗೆ ಮತ್ತು ಚಿಕ್ಕ ಪ್ರಮಾಣದ ಚಿಕಿತ್ಸೆಗೆ ಒಳಗಾಗಿದ್ದರೆ, ಅಂತಹವರು ಮುಂದಿನ 3 ತಿಂಗಳವರೆಗೆ ರಕ್ತದಾನ ಮಾಡಬಾರದು. ಕಾಮಾಲೆ, ಹೆಚ್.ಐ.ವಿ ಲೈಂಗಿಕ ರೋಗವಿರುವವರು ರಕ್ತದಾನ ಮಾಡಬಾರದು.

ಕ್ಯಾನ್ಸರ್, ಹೃದಯದ ಕಾಯಿಲೆ, ಅಸಹಜ ರಕ್ತಸ್ರಾವ, ಕಾರಣವಿಲ್ಲದೆ ತೂಕ ಕಡಿಮೆಯಾಗುವುದು, ಮಧುಮೇಹ, ಹೈಪಿಟೈಟಿಸ್ ಬಿ ಮತ್ತು ಸಿ, ಮೂತ್ರಪಿಂಡ ಸಂಬಂಧ ಕಾಯಿಲೆ ಹಾಗೂ ಲಿವರ್ಗೆ ಸಂಬಂಧಿಸಿದ ಕಾಯಿಲೆಯಿರುವ ವ್ಯಕ್ತಿ ರಕ್ತದಾನ ಮಾಡಬಾರದು.

ರಕ್ತದ ಮೂಲಕ ಹರಡಬಹುದಾದ ರೋಗಗಳು :

ಮಲೇರಿಯಾ, ಲೈಂಗಿಕ ಸಂಪರ್ಕದ ರೋಗಗಳು – ಸಿಫಿಲಿಸ್ ಇತ್ಯಾದಿ. ಹೈಪಿಟೈಟಿಸ್ ಬಿ ಮತ್ತು ಸಿ ಸೋಕಿನಿಂದುಂಟಾಗುವ ಕಾಮಾಲೆ. ಹೆಚ್.ಐ.ವಿ ಸೋಂಕು ಮತ್ತು ಏಡ್ಸ್.
ರಕ್ತವನ್ನು ಯಾವುದೇ ವ್ಯಕ್ತಿಗೆ ನೀಡುವ ಮೊದಲು ಪಡೆದ ರಕ್ತ ಮೇಲ್ಕಂಡ ರೋಗಗಳಿಂದ ಮುಕ್ತವಾಗಿದೆ ಎಂದು ತಿಳಿಸಲು ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ರಕ್ತದಾನ ಮಾಡುವುದರಿಂದ ದಾನಿಗಳಿಗೆ ಆಗುವ ಪ್ರಯೋಜನಗಳು
ರಕ್ತದಾನ ಮಾಡುವುದರಿಂದ ದಾನಿಯ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಪ್ರಚೋದನೆ ಆಗುತ್ತದೆ.ದೇಹದಲ್ಲಿ ಹೊಸ ರಕ್ತ ಚಾಲನೆಯಿಂದ ಕಾರ್ಯತತ್ಪರತೆ. ಜ್ಞಾಪನ ಶಕ್ತಿ ವೃದ್ಧಿಯಾಗುತ್ತದೆ. ರಕ್ತದಲ್ಲಿ ಕೊಬ್ಬಿನಾಂಶ ಕಡಿಮೆ ಮಾಡಲು ಸಹಾಯವಾಗುತ್ತದೆ. ಹೃದಯಾಘಾತವನ್ನು ಶೇ 80ಕ್ಕಿಂತಲೂ ಜಾಸ್ತಿ ತಡೆಯಲು ಸಹಾಯವಾಗುತ್ತದೆ. ರಕ್ತದ ಒತ್ತಡ, ಇತರೆ ಕೆಲವು ರೋಗಗಳನ್ನು ತಡೆಗಟ್ಟಲು ಸಹಾಯವಾಗುತ್ತದೆ ಎಂದು ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಕಾರ್ಯಕ್ರಮಾಧಿಕಾರಿಗಳು ತಿಳಿಸಿದ್ದಾರೆ.

significance theme of this day World Blood Donor Day: Today is `World Blood Donor Day': Know the history
Share. Facebook Twitter LinkedIn WhatsApp Email

Related Posts

ಮೊದಲು ಪುಷ್ಪ 2, ನಂತ್ರ RCB ಈವೆಂಟ್, ಈಗ ವಿಜಯ್ ರ್ಯಾಲಿ… ಹಿಂದಿನ ಕಾಲ್ತುಳಿತ ಘಟನೆಗಳಿಂದ ಪಾಠ ಕಲಿತಿಲ್ಲವೇ?

27/09/2025 10:03 PM2 Mins Read

BIGG UPDATE : ತಮಿಳುನಾಡಿನಲ್ಲಿ ನಟ ‘ವಿಜಯ್’ ರ್ಯಾಲಿ ವೇಳೆ ಕಾಲ್ತುಳಿತ ; ಮೃತರ ಸಂಖ್ಯೆ 31ಕ್ಕೆ ಏರಿಕೆ, 50 ಮಂದಿಗೆ ಗಾಯ |Stampede

27/09/2025 9:41 PM1 Min Read

ತಮಿಳುನಾಡಿನಲ್ಲಿ ಕಾಲ್ತುಳಿತ ದುರಂತ: ಪ್ರಧಾನಿ ನರೇಂದ್ರ ಮೋದಿ ಸಂತಾಪ

27/09/2025 9:36 PM1 Min Read
Recent News

KSRTCಗೆ ಎಕ್ಸಲೆನ್ಸ್ ಅವಾರ್ಡ್ಸ್ 2025ರ ಕಾರ್ಯಕ್ರಮದಲ್ಲಿ 9 ವಿಭಾಗಗಳಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ

27/09/2025 11:00 PM

ಶಿವಮೊಗ್ಗ: ಸಾಗರದ ಕೆಳದಿ ಮಠದಲ್ಲಿ ವಿಜಯ ದಶಮಿ ದಿನದಂದು ಪಚ್ಚೆಲಿಂಗ ದರ್ಶನಕ್ಕೆ ಭಕ್ತರಿಗೆ ಅವಕಾಶ

27/09/2025 10:21 PM

ಪ್ರತಿಭಾವಂತ ವಿದ್ಯಾರ್ಥಿಗಳು ಸಮಾಜದ ಆಸ್ತಿ: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ

27/09/2025 10:16 PM

ಶಿವಮೊಗ್ಗ: ಸೆ.29ರಂದು ಸಾಗರದ ಶೃಂಗೇರಿ ಶಂಕರಮಠದಲ್ಲಿ ‘ಶಾರದಾ ಪ್ರಸಾದ ಪುರಸ್ಕಾರ’ ಪ್ರದಾನ

27/09/2025 10:11 PM
State News
KARNATAKA

KSRTCಗೆ ಎಕ್ಸಲೆನ್ಸ್ ಅವಾರ್ಡ್ಸ್ 2025ರ ಕಾರ್ಯಕ್ರಮದಲ್ಲಿ 9 ವಿಭಾಗಗಳಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ

By kannadanewsnow0927/09/2025 11:00 PM KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ವು ಭಾರತೋಯ ಸಾರ್ವಜನಿಕ ಸಂಪರ್ಕ ಮಂಡಳಿಯ (PRCI) ವತಿಯಿಂದ ನಡೆದ *15ನೇ…

ಶಿವಮೊಗ್ಗ: ಸಾಗರದ ಕೆಳದಿ ಮಠದಲ್ಲಿ ವಿಜಯ ದಶಮಿ ದಿನದಂದು ಪಚ್ಚೆಲಿಂಗ ದರ್ಶನಕ್ಕೆ ಭಕ್ತರಿಗೆ ಅವಕಾಶ

27/09/2025 10:21 PM

ಪ್ರತಿಭಾವಂತ ವಿದ್ಯಾರ್ಥಿಗಳು ಸಮಾಜದ ಆಸ್ತಿ: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ

27/09/2025 10:16 PM

ಶಿವಮೊಗ್ಗ: ಸೆ.29ರಂದು ಸಾಗರದ ಶೃಂಗೇರಿ ಶಂಕರಮಠದಲ್ಲಿ ‘ಶಾರದಾ ಪ್ರಸಾದ ಪುರಸ್ಕಾರ’ ಪ್ರದಾನ

27/09/2025 10:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.