ಮೈಸೂರು: ವಿಶ್ವವಿಖ್ಯಾತ ದಸರಾ ನಾಳೆ ವಿಜಯದಶಮಿಯದಿನದಂದು ಜಂಬೂಸವಾರಿ ನಡೆಯಲಿದೆ.ದಸರಾ ಪಾಸ್ ವಿಚಾರವಾಗಿ ಸ್ಥಳೀಯ ಶಾಸಕರು ಮುನಿಸಿಕೊಂಡಿದ್ದಾರೆ.
ಹೀಗಾಗಿ ಕೆಲ ಶಾಸಕರು ಕಾರ್ಯಕ್ರಮಗಳಿಂದ ಹಿಂದೆ ಸರಿದಿದ್ದಾರೆ. ಹಲವು ಕಾರ್ಯಕ್ರಮಗಳಿಂದ ರಾಮದಾಸ್ ದೂರ ಉಳಿದಿದ್ದಾರೆ. ನಾಗೇಂದ್ರ ಸೇರಿದಂತೆ ಹಲವರಿಗೆ ಪಾಸ್ ವಿಚಾರದಲ್ಲಿ ಮುನಿಸುಕೊಂಡಿದ್ದಾರೆ. ಸಮರ್ಪಕವಾಗಿ ಪಾಸ್ ಸಿಕ್ಕಿಲ್ಲ ಎಂದು ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ನಾಳೆ ಮೈಸೂರು ಜಂಬೂಸವಾರಿಗೆ ಸಿಎಂ ಆಗಮಿಸಲಿದ್ದಾರೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಮುಂದೆ ಸ್ಫೋಟಗೊಳ್ಳುತ್ತಾ ಶಾಸಕರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಶ್ವವಿಖ್ಯಾತ ದಸರಾ ನಾಳೆ ವಿಜಯದಶಮಿಯದಿನದಂದು ಜಂಬೂಸವಾರಿ ನಡೆಯಲಿದೆ. ಮೆರವಣಿಗೆ ಸಾಗುವ ರಸ್ತೆ, ಪ್ರಮುಖ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದರು. ಲಕ್ಷಾಂತರ ಜನರು ಸೇರಬಹುದೆಂಬ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.