ಚಿಕ್ಕಬಳ್ಳಾಪುರ: ಜಿಲ್ಲೆಯ ವಿಶ್ವವಿಖ್ಯಾತ ನಂದಿ ಗಿರಿಧಾಮವನ್ನು ನವೀಕರಣ ಕಾಮಗಾರಿಯ ಹಿನ್ನಲೆಯಲ್ಲಿ ನಾಳೆಯಿಂದ ಒಂದು ತಿಂಗಳುಗಳ ಕಾಲ ಬಂದ್ ಮಾಡಲಾಗುತ್ತಿದೆ.
ಈ ಸಂಬಂಧ ಆದೇಶ ಹೊರಡಿಸಿರುವಂತ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಅವರು, ನಂದಿ ಗಿರಿಧಾಮದಲ್ಲಿ ರಸ್ತೆ ಡಾಂಬಾರೀಕರಣ ಕಾಮಗಾರಿ ಸೇರಿದಂತೆ ಇತರೆ ನವೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮಾರ್ಚ್.24ರ ನಾಳೆಯಿಂದ ಏಪ್ರಿಲ್ 25ರವರೆಗೆ ಒಂದು ತಿಂಗಳವರೆಗೆ ಬಂದ್ ಮಾಡಲಾಗುತ್ತಿದೆ ಎಂದಿದ್ದಾರೆ.
ಪ್ರವಾಸಿಗರ ಹಿತದೃಷ್ಠಿಯಿಂದ ವೀಕೆಂಡ್ ಶುಕ್ರವಾರ ಸಂಜೆ 6.30ರಿಂದ ಸೋಮವಾರ ಬೆಳಿಗ್ಗೆ 8 ಗಂಟೆಯಿಂದ ಮಾತ್ರವೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಇನ್ನುಳಿದಂತೆ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರದಂದು ವಾಹನಗಳ ಸಂಚಾರವನ್ನು ಬಂದ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ವಾರಾಂತ್ಯದ ದಿನವಾದಂತ ಶುಕ್ರವಾರ ಸಂಜೆ 6:30ರಿಂದ ಸೋಮವಾರ ಬೆಳಿಗ್ಗೆ 8 ಗಂಟೆ ವರೆಗೆ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಉಳಿದಂತೆ ವಾರದ 5 ದಿನಗಳು ಸಂಚಾರಕ್ಕೆ ಸಂಪೂರ್ಣ ನಿರ್ಬಂಧಿಸಲಾಗಿದೆ. ಮಾರ್ಚ್ 24ರ ನಾಳೆಯಿಂದ ಏಪ್ರಿಲ್ 25ರ ವರೆಗೂ 1 ತಿಂಗಳು 4 ವಾರಗಳ ಕಾಲ ನಿರ್ಬಂಧ ಜಾರಿಯಲ್ಲಿ ಇರಲಿದೆ. ನಂದಿಬೆಟ್ಟದ ತಪ್ಪಲಿನಿಂದ ಬೆಟ್ಟದವರೆಗೂ 7.70 ಕಿಲೋಮೀಟರ್ ದೂರದ ರಸ್ತೆ ಡಾಂಬಾರೀಕರಣ ಕಾಮಗಾರಿ ನಡೆಯಲಿದೆ ಎಂದು ಆದೇಶದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
BREAKING NEWS: ಹಾಸನದಲ್ಲಿ ತೀವ್ರ ಉಪಟಳ ನೀಡ್ತಿದ್ದ ಮೂರು ಪುಂಡಾನೆ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು