ಬೆಂಗಳೂರು: ವಿಪಕ್ಷಗಳ ನಾಯಕರು ಮಾತನ್ನಾಡುವ ಪರಿಸ್ಥಿತಿ ಇಲ್ಲ. ಯಾರಾದರೂ ಏನಾದರೂ ಮಾತಾಡಿದರೆ ತನಿಖಾ ಸಂಸ್ಥೆಗಳಿಂದ ನೊಟೀಸ್ ಬರುತ್ತೆ. ಮಹಾರಾಷ್ಟ್ರ, ಕರ್ನಾಟಕ, ಮಧ್ಯಪ್ರದೇಶ, ಗೋವಾ, ಅರುಣಾಚಲ ಪ್ರದೇಶದಲ್ಲಿ ಏನೇನಾಗಿದೆ ಅಂತ ಎಲ್ರಿಗೂ ಗೊತ್ತಿದೆ. ಹಾಲಿ ಸರ್ಕಾರಗಳನ್ನು ಬೀಳಿಸುವುದು ಪ್ರಜಾಪ್ರಭುತ್ವ ವಿರೋಧಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯು ರಾಜ್ಯಗಳಲ್ಲಿ ಬೇರೆ ಸರ್ಕಾರಗಳನ್ನು ಉರುಳಿಸುವ ಕೆಲಸ ಮಾಡುತ್ತಿದೆ. ದೇಶಕ್ಕೆ ಮಾತನ್ನಾಡುವ ರಾಷ್ಟ್ರಪತಿ ಬೇಕು. ದೇಶಕ್ಕೆ ಮೌನಿಯಾಗಿರುವ ರಾಷ್ಟ್ರಪತಿ ಅಥವಾ ರಬ್ಬರ್ ಸ್ಟಾಂನ್ ರಾಷ್ಟ್ರಪತಿಯ ಅಗತ್ಯ ಇಲ್ಲ ಎಂಬುದಾಗಿ ಕಾಂಗ್ರೆಸ್ ನ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಹೇಳಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಎರಡು ದಿನಗಳ ಹಿಂದೆ ಸುಪ್ರೀಂಕೋರ್ಟ್ ಕೆಲ ಅಭಿಪ್ರಾಯ ವ್ಯಕ್ತಪಡಿಸಿದೆ. ನೂಪುರ್ ಶರ್ಮಾ ಬಗ್ಗೆ ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ನ್ಯಾಯಾಂಗವು ಸಂವಿಧಾನಕ್ಕೆ ಉತ್ತರದಾಯಿ ಆಗಿರಬೇಕು ಅಂತ ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್ ನ ಅಭಿಪ್ರಾಯವನ್ನು ನಾನು ಸ್ವಾಗತಿಸುತ್ತೇವೆ. ಆದ್ರೆ ಸೋಷಿಯಲ್ ಮೀಡಿಯಾದಲ್ಲಿ ಸುಪ್ರೀಂಕೋರ್ಟ್ ನ ಅಭಿಪ್ರಾಯ ಬಗ್ಗೆ ಟೀಕೆ ಟಿಪ್ಪಣಿ ಮಾಡಲಾಗ್ತಿದೆ. ಕೆಟ್ಟದಾಗಿ ಟೀಕೆ ಮಾಡಲಾಗ್ತಿದೆ ಎಂದರು.

ನ್ಯಾಯಾಂಗದ ಮೇಲಿನ ಇಂತಹ ಟೀಕೆ ಪ್ರಜಾಪ್ರಭುತ್ವ ಕ್ಕೆ ಕಳಂಕವಾಗಿದೆ. ಸುಪ್ರೀಂ ಕೋರ್ಟ್ ತಮಗೆ ಅನುಕೂಲಕರ ತೀರ್ಪು ಕೊಟ್ರೆ ಸಂಭ್ರಮಪಡ್ತಾರೆ. ಆದರೆ ತಮಗೆ ಬೇಡವಾದ ತೀರ್ಪು ಅಭಿಮತ ಬಂದ್ರೆ ತೆಗಳುವುದು ಸರಿಯಲ್ಲ. ಇದು ಪ್ರಜಾಪ್ರಭುತ್ವ ಕ್ಕೆ ಅಪಾಯಕರ ಕೂಡ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ತಿದೆ. ಇಡಿ, ಸಿಬಿಐ, ಐಟಿ ದುರ್ಬಳಕೆ‌ ಆಗ್ತಿವೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ರು.

Share.
Exit mobile version