ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಸುಲಿಗೆ , ದೌರ್ಜನ್ಯ ಜಾಸ್ತಿಯಾಗುತ್ತದೆ. ಆದರೆ ನಗರದಲ್ಲಿ ವೈದ್ಯನೊಬ್ಬ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಸಂತ್ರಸ್ತೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
BIGG NEWS: ರಾಜ್ಯದಲ್ಲಿ ಓಡಾಡ್ತಿದೆಯಂತೆ ಗುಜರಿ ಅಂಬುಲೆನ್ಸ್; ಸಚಿವರಿಂದ ಸ್ಫೋಟಕ ಮಾಹಿತಿ ಬಹಿರಂಗ
ಹೊಟ್ಟೆ ನೋವು ಎಂದು ಹೋಗಿದ್ದ 19 ವರ್ಷದ ಯುವತಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ವೈದ್ಯನ ದುಷ್ಕೃತ್ಯದಿಂದ ಪಾರಾಗಲು ಯುವತಿ ಯತ್ನಿಸಿದಾಗ ಎದ್ದರೆ ಗ್ಲೂಕೋಸ್ ಹಾಕಿದ ಕೈಯಿಂದ ರಕ್ತ ಬರುತ್ತೆ ಎಂದು ಹೆದರಿಸಿದ್ದಾನೆ. ನಂತರ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಎಚ್ಚರಿಕೆ ನೀಡಿ ಮನೆಗೆ ಕಳುಹಿಸಿದ್ದಾನೆ. ಇದರಿಂದ ಭಯಬಿದ್ದ ಯುವತಿಗೆ ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಅದೇ ಕ್ಲೀನಿಕ್ಗೆ ಹೋಗೋಣ ಎಂದಾಗ ಹಿಂದೇಟು ಹಾಕಿದ್ದಾಳೆ. ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಯುವತಿ ತನ್ನ ಅಜ್ಜಿಯೊಂದಿಗೆ ಚಂದ್ರಾಲೇಔಟ್ ಬಳಿ ಇರುವ ಅರುಂಧತಿ ನಗರದಲ್ಲಿರುವ ವೈದ್ಯ ಉಬೇದುಲ್ಲನ ಕ್ಲಿನಿಕ್ಗೆ ಹೋಗಿದ್ದಾಳೆ.
BIGG NEWS: ರಾಜ್ಯದಲ್ಲಿ ಓಡಾಡ್ತಿದೆಯಂತೆ ಗುಜರಿ ಅಂಬುಲೆನ್ಸ್; ಸಚಿವರಿಂದ ಸ್ಫೋಟಕ ಮಾಹಿತಿ ಬಹಿರಂಗ
ಇಲ್ಲಿ ವೈದ್ಯ ಉಬೇದುಲ್ಲ ಅಜ್ಜಿಯನ್ನ ಹೊರಗಡೆ ಕುಳಿತುಕೊಳ್ಳಲು ಹೇಳಿ ಯುವತಿಗೆ ಗ್ಲೂಕೋಸ್ ಹಾಕಿಸಿ ಮಲಗಿಸಿದ್ದ. ಬಳಿಕ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಯುವತಿಗೆ ಎದ್ದರೆ ಗ್ಲೂಕೋಸ್ ಹಾಕಿದ ಕೈಯಿಂದ ರಕ್ತ ಬರುತ್ತೆ ಎಂದು ಹೆದರಿಸಿದ್ದ, ಅಲ್ಲದೆ ಇದನ್ನ ಹೇಳಿದರೆ ಸರಿ ಇರಲ್ಲ ಎಂದು ಬೆದರಿಕೆ ಹಾಕಿ ಮನೆಗೆ ಕಳಿಸಿದ್ದನು. ಹೀಗಾಗಿ ವೈದ್ಯನಿಗೆ ಹೆದರಿ ಯಾರೀಗೂ ಹೇಳದೆ ಸುಮ್ಮನಿದ್ದಳು.
ಆಕ್ರೋಶಗೊಂಡ ಯುವತಿಯ ಅಣ್ಣಂದಿರು ಕ್ಲಿನಿಕ್ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ. ಇದಕ್ಕೂ ಮುನ್ನ ವೈದ್ಯ ಉಬೇದುಲ್ಲ ಪರಾರಿಯಾಗಿದ್ದು, ಯುವತಿಯಿಂದ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದೆ. ತನಿಖೆ ಕೈಗೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.