Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆ ಇಲ್ಲ: ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ

02/08/2025 10:10 AM

BIG NEWS : ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಅಸ್ತಿಪಂಜರ ಪತ್ತೆಯಾದ ಬಳಿಕ ತನಿಖೆ ಚುರುಕು ಗೊಳಿಸಿದ ‘SIT’

02/08/2025 10:08 AM

BREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ವಿಷ ಸೇವಿಸಿ ಹೋಟೆಲ್ ಮಾಲೀಕ ಸೂಸೈಡ್

02/08/2025 10:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸೆ.6 ಗೌರಿ ಹಬ್ಬದಂದೇ ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಸೆ.6 ಗೌರಿ ಹಬ್ಬದಂದೇ ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0901/09/2024 2:26 PM

ಬೆಂಗಳೂರು: “ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಮಾಹಿತಿ ನೀಡಿದರು.

“ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರುನೋಡುತ್ತಿವೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಮೊನ್ನೆಯಷ್ಟೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿದ್ದೆ” ಎಂದು ತಿಳಿಸಿದರು.

“ಈ ಯೋಜನೆಗಳ ವಿಚಾರವಾಗಿ ಅನೇಕ ಟೀಕೆಗಳು ಬರುತ್ತಿದ್ದವು. ಟೀಕೆಗಳು ಬರಲಿ. ಈ ಯೋಜನೆಯಲ್ಲಿ ನೀರನ್ನು ಪಂಪ್ ಮಾಡುವ ಮೂಲಕ ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ಈ ಜಾಗ ಹಸ್ತಾಂತರವಾದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿವೆ.

ಈಗ ತಾತ್ಕಾಲಿಕವಾಗಿ ವಾಣಿ ವಿಲಾಸ ಅಣೆಕಟ್ಟಿಗೆ ನೀರು ಹರಿಸಲಾಗುತ್ತಿದೆ. ಯೋಜನೆಯ 7 ವಿಯರ್ ಗಳು ನೀರನ್ನು ಎತ್ತುತ್ತಿವೆ. ಈ ತಿಂಗಳ 6 ರಂದು ಉದ್ಘಾಟನೆಗೆ ಮುಖ್ಯಮಂತ್ರಿಗಳು ಒಪ್ಪಿದ್ದಾರೆ” ಎಂದು ತಿಳಿಸಿದರು.

“ಈ ಯೋಜನೆಯ ಫಲಾನುಭವಿ ಜಿಲ್ಲೆಯ ಜನರು ನೀರನ್ನು ಎತ್ತುವ ದೃಶ್ಯ ಕಣ್ತುಂಬಿಕೊಳ್ಳಬಹುದು. ಅಲ್ಲಿ ಜಾಗ ಕಿರಿದಾಗಿದ್ದರು, ಪೊಲೀಸರಿಗೆ ಹೇಳಿ ವ್ಯವಸ್ಥೆ ಮಾಡಲಾಗಿದೆ. ಇನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಪಕ್ಷಬೇಧ ಮರೆತು ಎಲ್ಲ ನಾಯಕರು, ರೈತರಿಗೆ ಆಹ್ವಾನಿಸಲಾಗುವುದು. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಹ್ವಾನ ನೀಡುವಂತೆ ನನ್ನ ಕಚೇರಿ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ಪವಿತ್ರವಾದ ಕಾರ್ಯಕ್ಕೆ ಬಂದು ಶುಭ ಗಳಿಗೆಗೆ ಸಾಕ್ಷಿಯಾಗಬೇಕು ಎಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

ಸಿಎಂ ನಿವಾಸದಲ್ಲಿ ನಡೆದ ಭೋಜನ ಕೂಟದಲ್ಲಿ ಯಾವ ವಿಚಾರ ಚರ್ಚೆಯಾಯಿತು ಎಂದು ಕೇಳಿದಾಗ, “ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಂಡಿವೆ. ಈಗ ಆ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕೂತಿದ್ದಾರೆ. ಗಾಂಧೀಜಿ ಅವರು ಹಾಕಿಕೊಟ್ಟಿರುವ ಮಾರ್ಗದರ್ಶನ ವಿಶ್ವವೇ ಗಮನಿಸಿದೆ. ಇದನ್ನು ಮುಂದಿನ ಪೀಳಿಗೆಗೆ ತಿಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಯಾವ ರೀತಿ ಕಾರ್ಯಕ್ರಮ ರೂಪಿಸಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಯಿತು. ಮುಂದಿನ ಒಂದುವಾರದಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವರದಿ ನೀಡುವಂತೆ ಸಚಿವರಿಗೆ ತಿಳಿಸಲಾಗಿದೆ. ಪಕ್ಷದ ವತಿಯಿಂದಲೂ ಕಾರ್ಯಕ್ರಮ ಮಾಡಲಾಗುತ್ತಿದ್ದು, ಆ ಬಗ್ಗೆ ಪಕ್ಷದ ಕಚೇರಿಯಲ್ಲಿ ಚರ್ಚೆ ಮಾಡಿದ್ದೆವು” ಎಂದು ತಿಳಿಸಿದರು.

ಕೋವಿಡ್ ಸಮಯದಲ್ಲಿನ ಅಕ್ರಮದ ಬಗ್ಗೆ ನ್ಯಾ.ಕುನ್ಹಾ ಅವರ ಸಮಿತಿ ವರದಿ ಸಲ್ಲಿಕೆ ಹಾಗೂ ಮಾಜಿ ಸಚಿವ ಸುಧಾಕರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುನ್ಹಾ ಅವರ ವರದಿಯಲ್ಲಿ ಏನಿದೆ ಎಂದು ಗೊತ್ತಿಲ್ಲ. ಸುಧಾಕರ್ ಅವರ ಹೇಳಿಕೆಯ ಬಗ್ಗೆಯೂ ಮಾಹಿತಿ ಇಲ್ಲ. ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ. ಈ ವಿಚಾರವಾಗಿ ಸರ್ಕಾರದ ವಕ್ತಾರರು ಪ್ರತಿಕ್ರಿಯೆ ನೀಡುತ್ತಾರೆ” ಎಂದು ತಿಳಿಸಿದರು.

ರಾಜಭವನದಲ್ಲಿ ವಿರೋಧ ಪಕ್ಷಗಳ ನಾಯಕರ ವಿರುದ್ಧ ಯಾವುದೇ ಅರ್ಜಿ ಇಲ್ಲ ಎಂದು ರಾಜ್ಯಪಾಲರು ಹೇಳಿದ್ದು, ಹಾಗಾದರೆ ಫೈಲ್ ಗಳು ಏನಾದವು ಎಂದು ಕೇಳಿದಾಗ, “ನಮಗೂ ಅದೇ ಯಕ್ಷಪ್ರಶ್ನೆಯಾಗಿದೆ. ನಾಳೆ ಈ ವಿಚಾರವಾಗಿ ಮಾಹಿತಿ ಪಡೆಯುತ್ತೇವೆ. ನಾವು ನಮಗೆ ಬಂದಿರುವ ಮಾಹಿತಿಗಳ ಮೇರೆಗೆ ನಮ್ಮ ಮನವಿ ಸಲ್ಲಿಸಿದ್ದೇವೆ” ಎಂದು ತಿಳಿಸಿದರು.

ಕಾಂಗ್ರೆಸ್ ನಾಯಕರ ವಿರುದ್ಧದ ಎರಡು ಅರ್ಜಿಗಳು ಮಾತ್ರ ರಾಜ್ಯಪಾಲರ ಬಳಿ ಉಳಿದುಕೊಂಡಿವೆಯಂತೆ ಎಂದು ಕೇಳಿದಾಗ, “ಆ ಬಗ್ಗೆ ನಮಗೆ ಮಾಹಿತಿ ಇಲ್ಲ. ನಮ್ಮ ವಿರುದ್ಧ ಕೆಲವರು ಅರ್ಜಿ ಕೊಡುತ್ತಿರುತ್ತಾರೆ. ಮತ್ತೆ ಕೆಲವರು ನನ್ನ ವಿರುದ್ಧ ದೂರು ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅವರು ದೂರು ನೀಡಲಿ” ಎಂದು ತಿಳಿಸಿದರು.

ಕಾಲೇಜು ದಿನಗಳಲ್ಲಿ ಬಳಸಿದ್ದ ಬೈಕ್ ಮಾರುವಿನ್ಯಾಸ

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾಲೇಜು ದಿನಗಳಲ್ಲಿ ಬಳಸಿದ್ದ ಯಜ್ದಿ ಬೈಕ್ ಅನ್ನು ಮರುವಿನ್ಯಾಸಗೊಳಿಸಿ ಅವರಿಗೆ ನೀಡಿದರು. ಈ ಬಗ್ಗೆ ಮಾತನಾಡಿದ ಶಿವಕುಮಾರ್ ಅವರು, “ನಾನು ಕಾಲೇಜು ದಿನಗಳಲ್ಲಿ ಈ ಬೈಕ್ ಓಡಿಸುತ್ತಿದ್ದೆ. ಕನಕಪುರದ ನಿವಾಸದಲ್ಲಿತ್ತು. ನಮ್ಮ ಸ್ನೇಹಿತರು ಈಗ ಅದಕ್ಕೆ ಹೊಸ ರೂಪ ಕೊಟ್ಟು ತಂದಿದ್ದಾರೆ” ಎಂದು ತಿಳಿಸಿದರು.

BIG NEWS: ಯಾವುದೇ ಪ್ರಕರಣಗಳ ‘ಪ್ರಾಸಿಕ್ಯೂಷನ್ ಅರ್ಜಿ’ ಬಾಕಿ ಇಲ್ಲ: ರಾಜಭವನ ಸ್ಪಷ್ಟನೆ

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಮಾಡಿದವರ ಗಮನಕ್ಕೆ : ರೇಷನ್ ಕಾರ್ಡ್ ನಲ್ಲಿ ನಿಮ್ಮ ಹೆಸರು ಈ ರೀತಿ ಚೆಕ್ ಮಾಡಿಕೊಳ್ಳಿ!

ಅ‌. 1ರಂದು ಮೋದಿ ಅಂಡ್ ಕಂಪನಿಗೆ ಜಮ್ಮು-ಕಾಶ್ಮೀರದ ಯುವಕರು ನಿರ್ಗಮನ ದ್ವಾರ ತೋರಿಸಲಿದ್ದಾರೆ: ಖರ್ಗೆ

Share. Facebook Twitter LinkedIn WhatsApp Email

Related Posts

ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆ ಇಲ್ಲ: ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ

02/08/2025 10:10 AM1 Min Read

BIG NEWS : ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಅಸ್ತಿಪಂಜರ ಪತ್ತೆಯಾದ ಬಳಿಕ ತನಿಖೆ ಚುರುಕು ಗೊಳಿಸಿದ ‘SIT’

02/08/2025 10:08 AM1 Min Read

BREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ವಿಷ ಸೇವಿಸಿ ಹೋಟೆಲ್ ಮಾಲೀಕ ಸೂಸೈಡ್

02/08/2025 10:05 AM1 Min Read
Recent News

ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆ ಇಲ್ಲ: ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ

02/08/2025 10:10 AM

BIG NEWS : ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಅಸ್ತಿಪಂಜರ ಪತ್ತೆಯಾದ ಬಳಿಕ ತನಿಖೆ ಚುರುಕು ಗೊಳಿಸಿದ ‘SIT’

02/08/2025 10:08 AM

BREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ವಿಷ ಸೇವಿಸಿ ಹೋಟೆಲ್ ಮಾಲೀಕ ಸೂಸೈಡ್

02/08/2025 10:05 AM

BREAKING: ಮಲಯಾಳಂ ನಟ ಕಲಾಭವನ್ ನವಾಸ್ ಹೋಟೆಲ್ ನಲ್ಲಿ ಶವವಾಗಿ ಪತ್ತೆ | Kalabhavan navas

02/08/2025 9:49 AM
State News
KARNATAKA

ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆ ಇಲ್ಲ: ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ

By kannadanewsnow8902/08/2025 10:10 AM KARNATAKA 1 Min Read

ನವದೆಹಲಿ: ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಗೆ ಅನುಮೋದನೆ ದೊರೆತಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಪ್ರತಾಪರಾವ್…

BIG NEWS : ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಅಸ್ತಿಪಂಜರ ಪತ್ತೆಯಾದ ಬಳಿಕ ತನಿಖೆ ಚುರುಕು ಗೊಳಿಸಿದ ‘SIT’

02/08/2025 10:08 AM

BREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ವಿಷ ಸೇವಿಸಿ ಹೋಟೆಲ್ ಮಾಲೀಕ ಸೂಸೈಡ್

02/08/2025 10:05 AM

ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣ ದೋಷಿ : ಇಂದು ಶಿಕ್ಷೆ ಪ್ರಕಟ, ಕನಿಷ್ಠ 10 ರಿಂದ 14 ವರ್ಷ ಜೀವಾವಧಿ ಶಿಕ್ಷೆ ಸಾಧ್ಯತೆ!

02/08/2025 9:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.