Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಸಲೀಂ ಅಧಿಕಾರ ಸ್ವೀಕಾರ, ಸಿಎಂ ಶುಭಾಶಯ

22/05/2025 3:50 PM

BREAKING : ಕೋಲಾರದಲ್ಲಿ ಅಕ್ರಮ ಸಂಬಂಧ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ : ಮೂವರು ಅರೆಸ್ಟ್!

22/05/2025 3:33 PM

ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ ಭರವಸೆ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

22/05/2025 3:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ: ಸೆ.6ಕ್ಕೆ ಮೊದಲ ಹಂತದ ಕಾಮಗಾರಿಗಳ ಲೋಕಾರ್ಪಣೆ: ಡಿಕೆಶಿ
KARNATAKA

ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ: ಸೆ.6ಕ್ಕೆ ಮೊದಲ ಹಂತದ ಕಾಮಗಾರಿಗಳ ಲೋಕಾರ್ಪಣೆ: ಡಿಕೆಶಿ

By kannadanewsnow0902/09/2024 2:46 PM

ಬೆಂಗಳೂರು : “ಎತ್ತಿನಹೊಳೆ ಯೋಜನೆ 2027 ಕ್ಕೆ ಪೂರ್ಣಗೊಳ್ಳಲಿದೆ. ಪ್ರಸ್ತುತ ಪಂಪ್ ಮಾಡಿದ ನೀರನ್ನು 132 ಕಿ.ಮೀ ದೂರದ ವಾಣಿವಿಲಾಸ ಸಾಗರಕ್ಕೆ ಹರಿಸಲಾಗುತ್ತದೆ. ಅರಣ್ಯ ಭೂಮಿ ತಕರಾರು ಬಗೆಹರಿಸಿ ಮುಂದಿನ 140 ಕಿ.ಮೀ ಕಾಮಗಾರಿ ಪೂರ್ಣಗೊಳಿಸಿ, ತುಮಕೂರಿಗೆ ನೀರು ಹರಿಸಲಾಗುವುದು. ಮೊದಲ ಹಂತದ ಕಾಮಗಾರಿಗಳನ್ನು ಸೆ.6ರಂದು ಲೋಕಾರ್ಪಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು “ಹೆಬ್ಬನಹಳ್ಳಿ ವಿತರಣಾ ತೊಟ್ಟಿ 4 ರಿಂದ 32 ಕಿ. ಮೀ. ದೂರದಲ್ಲಿ ಎಸ್ಕೇಪ್ ಚಾನೆಲ್ ಮಾಡಿದ್ದು, ಅಲ್ಲಿಂದ ನಾಲೆ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಲಾಗುವುದು. ನವೆಂಬರ್ 1 ರ ವೇಳೆಗೆ ಸುಮಾರು 5 ಟಿಎಂಸಿ ನೀರನ್ನು ಮೇಲಕ್ಕೆ ಎತ್ತಲಾಗುವುದು. ಅರಣ್ಯ ಇಲಾಖೆಯಿಂದ 502 ಎಕರೆ ಜಮೀನು ಪಡೆಯಬೇಕಾಗಿದ್ದು, ಇದಕ್ಕೆ ಬದಲಿಯಾಗಿ ನಾವು 452 ಎಕರೆ ಜಮೀನು ನೀಡಿದ್ದೇವೆ. ಮುಂದಿನ 4 ತಿಂಗಳಲ್ಲಿ ಈ ಕೆಲಸ ಮುಗಿಯಲಿದ್ದು, ಆನಂತರ ತುಮಕೂರು ಭಾಗದ ಕೆಲಸವನ್ನು ತ್ವರಿತವಾಗಿ ಮುಗಿಸಲಾಗುವುದು” ಎಂದು ಹೇಳಿದರು.

“ಯೋಜನೆಯ ಒಟ್ಟು 24 ಟಿಎಂಸಿ ನೀರನ್ನು ಕುಡಿಯುವ ನೀರು ಹಾಗೂ ಕೆರೆಗಳನ್ನು ತುಂಬಿಸಲು ಬಳಸಿಕೊಳ್ಳಲಾಗುವುದು. ರೈತರು ತಮ್ಮ ಜಮೀನುಗಳನ್ನು ನೀಡಿ ಸಹಕಾರ ನೀಡಿದ್ದಾರೆ. ನೀರನ್ನು ಎತ್ತಲು ಸಾಧ್ಯವಿಲ್ಲ ಎಂದು ಒಂದಷ್ಟು ಜನ ಅಪಸ್ವರ ಎತ್ತಿದ್ದರು. ನಾನು ಇಲಾಖೆಯ ಜವಾಬ್ದಾರಿವಹಿಸಿಕೊಂಡ ಮೇಲೆ ಕಾರ್ಯಪ್ರವೃತ್ತವಾಗಿ ಈ ಯೋಜನೆ ಪೂರ್ಣಗೊಳಿಸಲು ಮುಂದಾದೆ. ಯೋಜನೆಯ ವಿರುದ್ಧವಾಗಿ ಒಂದಷ್ಟು ಜನ ಬ್ಲಾಕ್ ಮೇಲ್ ಮಾಡುತ್ತಿದ್ದರು ಅದನ್ನು ನಿವಾರಿಸಲಾಯಿತು. ಹಿಂದಿನ ಸರ್ಕಾರವು ಸಾಕಷ್ಟು ಪ್ರಯತ್ನ ಪಟ್ಟಿತ್ತು, ಆದರೆ ಸಹಕಾರ ಸಿಕ್ಕಿರಲಿಲ್ಲ” ಎಂದು ತಿಳಿಸಿದರು.

12.05 ನಿಮಿಷಕ್ಕೆ ಲೋಕಾರ್ಪಣೆ

“ಸೆ. 6 ಶುಕ್ರವಾರದಂದು 12.05 ನಿಮಿಷಕ್ಕೆ ಯೋಜನೆಯ ಪ್ರಮುಖ ಜಾಗದಲ್ಲಿ ನೀರನ್ನು ಮೇಲಕ್ಕೆ ಎತ್ತುವ ಪಂಪ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡುತ್ತಾರೆ. ಒಂದಷ್ಟು ಪ್ರಮುಖ ಭಾಗಗಳಲ್ಲಿ 10.30 ಒಳಗೆ ಸಚಿವರುಗಳು ಚಾಲನೆ ನೀಡುತ್ತಾರೆ. ಗೌರಿ ಹಬ್ಬದ ಶುಭದಿನದಂದು ಗಂಗಾ ಮಾತೆಗೆ ಪೂಜೆ ಸಲ್ಲಿಸಲಾಗುವುದು” ಎಂದರು.

“ಪ್ರಾಯೋಗಿಕ ಪರೀಕ್ಷೆ ನಡೆಸುವುದಕ್ಕೆ ಮುಂಚೆ ಒಂದಷ್ಟು ಕಡೆ ನೀರು ಸೋರಿಕೆಯಾಗಿತ್ತು. ಇದನ್ನೂ ಸಹ ಸರಿಪಡಿಸಲಾಗಿದೆ. ಸಣ್ಣ, ನದಿ, ತೊರೆಗಳಿಂದ ಎತ್ತುವ ನೀರನ್ನು ಹೇಗೆ ಸದುಪಯೋಗಪಡಿಸಿಕೊಳ್ಳಬೇಕು ಎಂದು ಅಧ್ಯಯನ ಮಾಡಲು ಪ್ರತ್ಯೇಕ ತಂಡ ರಚಿಸಲಾಗಿದೆ. ಅವರು ಅಧ್ಯಯನ ನಡೆಸಿ ವರದಿ ನೀಡುತ್ತಾರೆ” ಎಂದರು.

“ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರದ ಸ್ವಲ್ಪ ಭಾಗ, ತುಮಕೂರು, ಹಾಸನ, ಹಾಗೂ ಚಿಕ್ಕಮಗಳೂರು ಸೇರಿದಂತೆ ಒಟ್ಟು 7 ಜಿಲ್ಲೆಗಳ ಜನರಿಗೆ ಅನುಕೂಲವಾಗುವುದು. ಎಲ್ಲಾ ಪಕ್ಷಗಳ ಮುಖಂಡರು ಹಾಗೂ ರೈತ ಸಂಘಟನೆಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಆಹ್ವಾನ ಪತ್ರಿಕೆ ಇಲ್ಲ ಎಂದು ಬೇಸರಿಸಬೇಡಿ ಮಾಧ್ಯಮಗಳ ಮೂಲಕ ಹಾಗೂ ಪತ್ರಿಕಾ ಜಾಹೀರಾತಿನ ಮೂಲಕ ವೈಯಕ್ತಿಕವಾಗಿ ಆಹ್ವಾನ ಮಾಡುತ್ತೇನೆ. ತೊರೆ ಕಾಡನಹಳ್ಳಿಯಿಂದ ಬೆಂಗಳೂರಿಗೆ ನೀರು ಸರಬರಾಜು ಆಗುತ್ತಿರುವುದಕ್ಕಿಂತ ಬೃಹತ್ ಪಂಪ್ ಗಳನ್ನು ಎತ್ತಿನಹೊಳೆ ಯೋಜನೆಯಲ್ಲಿ ಅಳವಡಿಸಲಾಗಿದೆ” ಎಂದರು.

ತುಂಗಭದ್ರಾ ಅಣೆಕಟ್ಟಿನಲ್ಲಿ ಶೇ.98 ರಷ್ಟು ನೀರು ಸಂಗ್ರಹ

“ತುಂಗಭದ್ರಾ ಅಣೆಕಟ್ಟು ಮತ್ತೆ ತುಂಬುತ್ತಿರುವುದು ಸಂತಸದ ವಿಚಾರ. 105.79 ಸಾಮರ್ಥ್ಯದ ಅಣೆಕಟ್ಟಿನಲ್ಲಿ ಪ್ರಸ್ತುತ ಸುಮಾರು 98 ಟಿಎಂಸಿ ನೀರು ಸಂಗ್ರಹಗೊಂಡಿದೆ. ನಿವೃತ್ತ ಎಂಜಿನಿಯರ್ ಕನ್ನಯ್ಯ ನಾಯ್ಡು ಅವರ ಮಾರ್ಗದರ್ಶನದಲ್ಲಿ ಸುಮಾರು 108 ಜನ ಹಗಲು ರಾತ್ರಿ ಅಧಿಕಾರಿಕಾರಿಗಳು, ಕಾರ್ಮಿಕ ವರ್ಗ ಕೆಲಸ ಮಾಡಿದ್ದಾರೆ. ಇವರಿಗೆ ಗೌರವ ಸಲ್ಲಿಸಿ ಪ್ರಶಸ್ತಿ ಪತ್ರ ನೀಡಬೇಕು ಎಂದು ಸರ್ಕಾರ ನಿರ್ಧರಿಸಿದೆ” ಎಂದರು.

“ತುಂಗಭದ್ರಾ ಕ್ರಸ್ಟ್ ಗೇಟ್ ಅವಘಡ ಸಂಭವಿಸಿದಾಗ ಸಾಕಷ್ಟು ಜನ ನೀರನ್ನು ಹೊರಗೆ ಬಿಡಬೇಡಿ ಎಂದರು. ನಾನು ತಂತ್ರಜ್ಞರ ಬಳಿ ಚರ್ಚೆ ನಡೆಸಿ ಅಣೆಕಟ್ಟಿನ ಉಳಿವಿಗಾಗಿ ಕಠಿಣ ನಿರ್ಧಾರ ತೆಗೆದುಕೊಂಡೆ. ರೈತರು ಬೆಳೆ ಹಾಳಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರೂ ನೀರನ್ನು ಹೊರಗೆ ಬಿಡಬೇಕಾಯಿತು. ಅವಘಡ ನಡೆದ 3 ಗಂಟೆಗಳಲ್ಲಿ ಗೇಟಿನ ವಿನ್ಯಾಸವನ್ನು ಮೂರು ಎಂಜಿನಿಯರಿಂಗ್ ಸಂಸ್ಥೆಗಳಿಗೆ ನೀಡಿ ತಯಾರಿಸಲು ಸೂಚನೆ ನೀಡಿದೆವು. ಈ ಕಾರ್ಯವನ್ನು ಇಡೀ ದೇಶವೇ ಗಮನಿಸುತ್ತಿತ್ತು. ಕೇವಲ 4 ದಿನಗಳಲ್ಲಿ ನೂತನ ಗೇಟ್ ಅನ್ನು ಅಳವಡಿಸಲಾಯಿತು. ಶೇ.50 ರಷ್ಟು ನೀರು ಪೋಲಾಯಿತು” ಎಂದು ಹೇಳಿದರು.

“ಎತ್ತಿನಹೊಳೆ ಕಾರ್ಯಕ್ರಮ ಮುಗಿದ ತಕ್ಷಣ ತುಂಗಭದ್ರಕ್ಕೂ ಬಾಗಿನ ಅರ್ಪಿಸಲಾಗುವುದು. ಆ ಭಾಗದ ರೈತರ ಪ್ರಾರ್ಥನೆಗೆ ಫಲ ಸಿಕ್ಕಿದೆ. ವಿರೋಧ ಪಕ್ಷಗಳ ನಾಯಕರು ಮಾಡಿದ ಟೀಕೆಗಳನ್ನು ಮಾಧ್ಯಮಗಳು ಜನರಿಗೆ ತಿಳಿಸಬೇಕು, ಜೊತೆಗೆ ನಮ್ಮ ಕೆಲಸವನ್ನೂ ಪ್ರಚಾರ ಮಾಡಬೇಕು” ಎಂದರು.

“ಗೇಟ್ ತುಂಡಾದ ಅವಘಡ ಸಂಭವಿಸಿದ ಮೇಲೆ ಸೆಕ್ಷನ್ 38, 39 ಅಣೆಕಟ್ಟು ಸಂರಕ್ಷಣಾ ಕಾಯ್ದೆ ಪ್ರಕಾರ, ನೂತನವಾಗಿ ಸಂರಕ್ಷಣಾ ಪರಿಶೀಲನಾ ಸಮಿತಿಯನ್ನು ಸಿಡ್ಬ್ಲೂಸಿ ಮಾಜಿ ಅಧ್ಯಕ್ಷರಾಗಿದ್ದ ಎ.ಕೆ.ಬಜಾಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ. ಈಗಾಗಲೇ ಸಮಿತಿ ಕೆಲಸ ಮಾಡುತ್ತಿದೆ. ತುಂಗಭದ್ರಾ ಗೇಟುಗಳ ವಿಚಾರವಾಗಿ ಸಭೆ ನಡೆಸಲಾಗಿದೆ” ಎಂದರು.

“ಕಬಿನಿ ಅಣೆಕಟ್ಟು ಕೂಡ ಅಪಾಯದಲ್ಲಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿದ್ದವು. ಆ ನಂತರ ಈ ಸಮಿತಿ ಅಲ್ಲಿಗೂ ತೆರಳಿ ನೀರಿನ ಆಳಕ್ಕೆ ಇಳಿದು ಪರಿಶೀಲನೆ ನಡೆಸಿದೆ. ನನ್ನ ಸೂಚನೆಗಳನ್ನು ಕಾಯಬೇಡಿ, ಯಾವುದಾದರೂ ತೊಂದರೆ ಇದ್ದರೆ ಕೂಡಲೇ ಕಾರ್ಯಪ್ರವೃತ್ತರಾಗಿ ಎಂದು ಸೂಚಿಸಿದ್ದೇನೆ. ಈ ಸಮಿತಿ ವರದಿ ನೀಡುವ ತನಕ ಇದರ ಬಗ್ಗೆ ನಾನು ಮಾಹಿತಿ ನೀಡಲು ಆಗುವುದಿಲ್ಲ” ಎಂದು ಹೇಳಿದರು.

BIG NEWS: ಈಗ ‘ಸಚಿವ ಎಂ.ಬಿ ಪಾಟೀಲ’ಗೂ ಪ್ರಾಸಿಕ್ಯೂಷನ್ ಸಂಕಷ್ಟ: ಮಾಹಿತಿ ಕೋರಿ ‘CS’ಗೆ ರಾಜ್ಯಪಾಲರ ಪತ್ರ

BREAKING : ‘ಮನಿ ಲಾಂಡರಿಂಗ್’ ಕೇಸ್ : ‘ED’ ಯಿಂದ AAP ಶಾಸಕ ‘ಅಮಾನತುಲ್ಲಾ ಖಾನ್’ ಅರೆಸ್ಟ್!

ಸಾರ್ವಜನಿಕರೇ ಗಮನಿಸಿ : `ಆಧಾರ್ ಕಾರ್ಡ್’ ಉಚಿತ ಅಪ್ ಡೇಟ್ ಗೆ ಸೆ.14 ಕೊನೆಯ ದಿನ!

Share. Facebook Twitter LinkedIn WhatsApp Email

Related Posts

ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಸಲೀಂ ಅಧಿಕಾರ ಸ್ವೀಕಾರ, ಸಿಎಂ ಶುಭಾಶಯ

22/05/2025 3:50 PM1 Min Read

BREAKING : ಕೋಲಾರದಲ್ಲಿ ಅಕ್ರಮ ಸಂಬಂಧ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ : ಮೂವರು ಅರೆಸ್ಟ್!

22/05/2025 3:33 PM1 Min Read

ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ ಭರವಸೆ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

22/05/2025 3:12 PM2 Mins Read
Recent News

ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಸಲೀಂ ಅಧಿಕಾರ ಸ್ವೀಕಾರ, ಸಿಎಂ ಶುಭಾಶಯ

22/05/2025 3:50 PM

BREAKING : ಕೋಲಾರದಲ್ಲಿ ಅಕ್ರಮ ಸಂಬಂಧ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ : ಮೂವರು ಅರೆಸ್ಟ್!

22/05/2025 3:33 PM

ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ ಭರವಸೆ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

22/05/2025 3:12 PM

BIG NEWS : ಕೋಮು, ದ್ವೇಷ ಭಾಷಣ ಪ್ರಕರಣ : ಶಾಸಕ ಹರೀಶ್ ಪೂಂಜಾಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

22/05/2025 3:11 PM
State News
KARNATAKA

ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಸಲೀಂ ಅಧಿಕಾರ ಸ್ವೀಕಾರ, ಸಿಎಂ ಶುಭಾಶಯ

By kannadanewsnow0922/05/2025 3:50 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಸಲೀಂ ಅವರನ್ನು ನೇಮಕ ಮಾಡಲಾಗಿತ್ತು. ಇಂತಹ ಅವರು ಇಂದು…

BREAKING : ಕೋಲಾರದಲ್ಲಿ ಅಕ್ರಮ ಸಂಬಂಧ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ : ಮೂವರು ಅರೆಸ್ಟ್!

22/05/2025 3:33 PM

ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ ಭರವಸೆ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

22/05/2025 3:12 PM

BIG NEWS : ಕೋಮು, ದ್ವೇಷ ಭಾಷಣ ಪ್ರಕರಣ : ಶಾಸಕ ಹರೀಶ್ ಪೂಂಜಾಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

22/05/2025 3:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.