ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತದಾನಕ್ಕೆ ಅವಕಾಶ ನೀಡಿ ಎಂದು ಶಾಸಕನೆ ಕುಲಕರಣಿ ಸಲ್ಲಿಸಿದ ಅರ್ಜಿಯನ್ನು ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಗೊಳಿಸಿತ್ತು. ಆದರೆ ಇದೀಗ ಕರ್ನಾಟಕ ಹೈಕೋರ್ಟ್ ವಿನಯ್ ಕುಲಕರ್ಣಿ ಅವರಿಗೆ ಮತದಾನಕ್ಕೆ ಅವಕಾಶ ನೀಡಿದೆ.

ಹೌದು ಶಾಸಕ ವಿನಯ್ ಕುಲಕರ್ಣಿಗೆ ಮತದಾನದಲ್ಲಿ ಭಾಗವಹಿಸಲು ಅನುಮತಿ ನೀಡಲಾಗಿದೆ. ಈ ಕುರಿತಂತೆ ಹೈಕೋರ್ಟ್ ಏಕ ಸದಸ್ಯ ಪೀಠ ಅನುಮತಿ ನೀಡಿ ಆದೇಶ ಹೊರಡಿಸಿದೆ.ಮತದಾನ ಮಾಡಿ ತಕ್ಷಣ ಧಾರವಾಡ ತೊರೆಯುವಂತೆ ಶಾಸಕ ವಿನಯ್ ಕುಲಕರಣಿಗೆ ಹೈಕೋರ್ಟ್ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

Share.
Exit mobile version