ರಾಮನಗರ: ಕುಮಾರಸ್ವಾಮಿ ಸ್ವಕ್ಷೇತ್ರದಲ್ಲೇ ಸಿ.ಪಿ ಯೋಗೇಶ್ವರ ಮತ್ತು ಹೆಚ್ .ಡಿ ಕುಮಾರಸ್ವಾಮಿ ವಿರುದ್ಧ ಜಟಾಪಟಿ ನಡೆದಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ ವೇಳೆ ಈ ಘಟನೆ ನಡೆದಿದೆ.
ಈ ವೇಳೆ ಜೆಡಿಎಸ್ ಶಾಕರು ವಾಕ್ಸಮರ ಮಾಡಿದ್ದಾರೆ. ಯಾಕಂದರೆ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಶಾಸಕರನ್ನು ಕಡೆಗಣಿಸಿದ್ದಾರೆ ಎಂದು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸಿ.ಪಿ ಯೋಗೇಶ್ವರ ಕಾರು ಬರುತ್ತಿದಂತೆ ಮುತ್ತಿಗೆ ಹಾಕಿ ಕಪ್ಪು ಪಟ್ಟಿ ಪ್ರದರ್ಶನಕ್ಕೆ ಜೆಡಿಎಸ್ ಕಾರ್ಯಕರ್ತರು ಮುಂದಾಗಿದ್ದಾರೆ. ಚನ್ನಪಟ್ಟಣದಲ್ಲಿ ಭೂಮಿ ಪೂಜೆ ವೇಳೆ ಜೆಡಿಎಸ್ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ರಸ್ತೆ ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಶಾಸಕರನ್ನು ಕಡೆಗಣಿಸಿದ್ದು ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪ್ರತಿಭಟನೆ ವೇಳೆ ಕಾರ್ಯಕರ್ತರನು ಪೊಲೀಸರು ಬಂಧಿಸಿದ್ದಾರೆ.