ಬೆಂಗಳೂರು : ಇಂದು ರಾಜ್ಯಕ್ಕೆ ಆಗಮಿಸಿದ್ದ ಎ ಐ ಸಿ ಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಇಂದು ಸಿಎಂ ಕಾವೇರಿ ನಿವಾಸದಲ್ಲಿ ಸಚಿವರ ಜೊತೆಗೆ ಚರ್ಚೆ ನಡೆಸಿದರು. ಈ ವೇಳೆ ಕೆಸಿ ವೇಣುಗೋಪಾಲ್ ಅವರು ಸಚಿವರಿಗೆ ಎರಡು ತಿಂಗಳ ಗಡವು ಕೊಟ್ಟು ಕಾರ್ಯವೈಖರಿ ಬದಲಾಯಿಸಿಕೊಳ್ಳಿ ಎಂದು ಎಚ್ಚರಿಕೆ ನೀಡಿದ್ದಾರೆ.
ಸಚಿವರ ಜೊತೆ ಸುರ್ಜೆವಾಲಾ ಹಾಗೂ ಕೆಸಿ ವೇಣುಗೋಪಾಲ ಸಭೆ ವಿಚಾರವಾಗಿ ಸಭೆಯಲ್ಲಿ ಸಚಿವರಿಗೆ ಕೆ ಸಿ ವೇಣುಗೋಪಾಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಿಮ್ಮ ಕಾರ್ಯವೈಖರಿ ತವರು ಉಸ್ತುವಾರಿ ಜಿಲ್ಲೆಗೆ ಮಾತ್ರ ಸೀಮಿತವಾಗಿದೆ.ರಾಜ್ಯ ಪ್ರವಾಸ ಮಾಡಿ ಇಲಾಖೆಯಲ್ಲಿ ಸುಧಾರಣೆ ತರಬೇಕು.ಉಸ್ತುವಾರಿ ಜಿಲ್ಲೆ ಬಿಟ್ಟು ಬೇರೆ ಜಿಲ್ಲೆಗಳಿಗೂ ಪ್ರವಾಸ ಮಾಡಬೇಕು. ನಿಮ್ಮ ಕಾರ್ಯ ವೈಖರಿ ನಮಗೆ ತೃಪ್ತಿದಾಯಕವಾಗಿಲ್ಲ ಎಂದರು.
ಸರಿಯಾಗಿ ಕೆಲಸ ಮಾಡಿದ್ರೆ ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತಿದ್ದೆವು. ಲೋಕಸಭಾ ಚುನಾವಣೆಯಲ್ಲಿ ಕನಿಷ್ಠಪಕ್ಷ 15 ಸ್ಥಾನಗಳನ್ನಾದರೂ ಗೆಲ್ಲುತ್ತಿದ್ದೆವು. ಬಿಜೆಪಿ ಅವಧಿಯ ಹಗರಣಗಳ ತನಿಖೆಯನ್ನು ಚುರುಕುಗೊಳಿಸಿ. ಮುಡಾ ವಿಚಾರದಲ್ಲಿ ರಾಜಪಾಲರು ವಿರುದ್ಧ ಕಾನೂನು ಹೋರಾಟ ಮಾಡಿ. ಇದಕ್ಕೆ ಹೈಕಮಾಂಡ್ ಜೊತೆ ಇರಲಿದೆ ಎಂದು ಅಭಯ ನೀಡಿದರು.
ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಎಲ್ಲರೂ ನಿಲ್ಲಬೇಕು.ಜೆಡಿಎಸ್ ಬಿಜೆಪಿಗೆ ಪರಿಣಾಮಕಾರಿಯಾಗಿ ತಿರುಗೇಟು ಕೊಡುವ ಕೆಲಸ ಮಾಡಿ. ಈ ಮೂಲಕ ಕಾಂಗ್ರೆಸ್ ನಲ್ಲಿ ಅಸಮಾಧಾನವಿದೆ ಎನ್ನುವ ಚರ್ಚೆಗೆ ಬ್ರೇಕ್ ಹಾಕಿ. ಚರ್ಚೆಗೆ ಬ್ರೇಕ್ ಹಾಕಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಎರಡು ತಿಂಗಳುಗಡವು ಬಳಸಿಕೊಂಡು ಕಾರ್ಯವೈಖರಿ ಪೂರ್ಣಗೊಳಿಸಿ.
ಎರಡು ತಿಂಗಳಲ್ಲಿ ಸರಿಪಡಿಸಿಕೊಳ್ಳುತ್ತಿದ್ದಾರೆ ಖಾತೆ ಕಳೆದುಕೊಳ್ಳಲು ರೆಡಿಯಾಗಿ ಎಂದು ಸಭೆಯಲ್ಲಿ ಸಚಿವರಿಗೆ ಕೆಸಿ ವೇಣುಗೋಪಾಲ್ ಖಡಕ್ ಎಚ್ಚರಿಕೆ ನೀಡಿದರು.ನಿಮ್ಮ ವರ್ತನೆ ಇದೇ ರೀತಿ ಮುಂದುವರೆದರೆ ಹೈಕಮಾಂಡ್ ಸಹಿಸುವುದಿಲ್ಲ ಎಂದು ಸಭೆಯಲ್ಲಿ ಸಚಿವರಿಗೆ ಕೆ ಸಿ ವೇಣುಗೋಪಾಲ್ ತರಾಟೆ ತೆಗೆದುಕೊಂಡರು.