ಬೆಂಗಳೂರು: ಕಾಂಗ್ರೆಸ್ ಪಕ್ಷದ ( Congress Party ) ಶಿಸ್ತು ಪಾಲನಾ ಸಮಿತಿ ನೀಡಿದ್ದಂತ ನೋಟಿಸ್ ಗೆ ಈವರೆಗೆ ಕೆಜಿಎಫ್ ಬಾಬು ( KGF Babu ) ಉತ್ತರಿಸಿರಲಿಲ್ಲ. ಹೀಗಾಗಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿ ಕೆಪಿಸಿಸಿ ಆದೇಶಿಸಿದೆ.

ಈ ಕುರಿತಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಶಿಸ್ತುಪಾಲನಾ ಸಮಿತಿಯ ಮುಖ್ಯಸ್ಥರಾದಂತ ಕೆ ರಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ. ಆ ಆದೇಶದಲ್ಲಿ ಮೂರು ತಿಂಗಳ ಹಿಂದೆಯೇ ತಾವು ಪಕ್ಷದ ನೀತಿ ವಿರುದ್ಧವಾಗಿ ಮಾಧ್ಯಮದವರಿಗೆ ವಿವಿಧ ರೀತಿಯ ಹೇಳಿಕೆ ನೀಡುವ ಬಗ್ಗೆ ಶಿಸ್ತು ಪಾಲನ ಸಮಿತಿಯಿಂದ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು ಎಂದಿದ್ದಾರೆ.

ಇದಕ್ಕೆ ಸಮಂಜಸ ಉತ್ತರವನ್ನು ಈವರೆಗೆ ನೀಡಿಲ್ಲ. ಇದಲ್ಲದೇ ಇಂದು ಸಹ ಸ್ವಯಂ ಪ್ರೇರಿತವಾಗಿ ನೀವು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಅಧ್ಯಕ್ಷರ ಪೂರ್ವಾನುಮತಿ ಇಲ್ಲದೇ ಕಾಂಗ್ರೆಸ್ ಪಕ್ಷವನ್ನು ಉದ್ದೇಶಿಸಿ ವಿವಿಧ ಹೇಳಿಕೆಯನ್ನು ಮಾಧ್ಯಮಕ್ಕೆ ನೀಡಿದ್ದೀರಿ. ಈ ನಡೆಯೂ ಪಕ್ಷಕ್ಕೆ ಹಾನಿಯುಂಟು ಮಾಡುತ್ತಿದ್ದೆ. ಪಕ್ಷದ ಹಿನ್ನೆಡೆಗೆ ಕಾರಣವಾಗುತ್ತಿದೆ ಎಂದು ಗಂಭೀರವಾಗಿ ಪರಿಗಮಿಸಿ, ಈ ಕೂಡಲೇ ನಿಮ್ಮನ್ನು ಪಕ್ಷದಿಂದ ಅಮಾನತುಗೊಳಿಸಿರೋದಾಗಿ ತಿಳಿಸಿದ್ದಾರೆ.

Share.
Exit mobile version