Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದ ಪೊಲೀಸರ ‘ಹೆಚ್ಚುವರಿ ರಜೆ’ ರದ್ದು: ಗೃಹ ಸಚಿವ ಜಿ.ಪರಮೇಶ್ವರ್‌

10/05/2025 10:50 AM

BREAKING: ಜೈಶಂಕರ್, NSA ದೋವಲ್ ಭೇಟಿ ಮಾಡಿದ ಪ್ರಧಾನಿ ಮೋದಿ | India -Pak war

10/05/2025 10:47 AM

ಕರ್ನಾಟಕ ರಾಜ್ಯ ಸಚಿವ ಸಂಪುಟದ ನಿರ್ಣಯಗಳು ಹೀಗಿವೆ

10/05/2025 10:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜ.12ರಂದು ಯುವನಿಧಿ ಕಾರ್ಯಕ್ರಮ: ಶಿವಮೊಗ್ಗ ನಗರದಲ್ಲಿ ಈ ಸಂಚಾರ ಬದಲಾವಣೆ, ವಾಹನ ನಿಲುಗಡೆ ನಿಷೇಧ
KARNATAKA

ಜ.12ರಂದು ಯುವನಿಧಿ ಕಾರ್ಯಕ್ರಮ: ಶಿವಮೊಗ್ಗ ನಗರದಲ್ಲಿ ಈ ಸಂಚಾರ ಬದಲಾವಣೆ, ವಾಹನ ನಿಲುಗಡೆ ನಿಷೇಧ

By kannadanewsnow0910/01/2024 6:17 PM

ಶಿವಮೊಗ್ಗ : ಕರ್ನಾಟಕ ಸರ್ಕಾರ ಆಯೋಜಿಸಿರುವ ಯುವನಿಧಿ ಯೋಜನೆ ಕಾರ್ಯಕ್ರಮವನ್ನು ನಗರದ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ನಿಲುಗಡೆ ಹಾಗೂ ತಾತ್ಕಾಲಿಕವಾಗಿ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.

ಜ.12 ರಂದು ಬೆಳಿಗ್ಗೆ 6 ರಿಂದ ಸಂಜೆ 6.30 ರವರೆಗೆ ಕೆಳಕಂಡಂತೆ ವಾಹನಗಳ ಮಾರ್ಗ ಬದಲಾವಣೆ

ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ಆಲ್ಕೊಳ ಸರ್ಕಲ್ ಗೋಪಾಳ ಸರ್ಕಲ್ ನ್ಯೂಮಂಡ್ಲಿ ಸರ್ಕಲ್ ಮಾರ್ಗವಾಗಿ ತೀರ್ಥಹಳ್ಳಿ ರಸ್ತೆಗೆ ಸೇರುವುದು. ತೀರ್ಥಹಳ್ಳಿ ರಸ್ತೆ ಕಡೆಯಿಂದ ಸಾಗರ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ನ್ಯೂಮಂಡ್ಲಿ ಸರ್ಕಲ್ ಗೋಪಾಳ ಸರ್ಕಲ್ ಆಲ್ಕೊಳ ಮಾರ್ಗವಾಗಿ ಸಾಗರ ರಸ್ತೆ ಬಂದು ಸೇರುವುದು. ಶಿವಮೊಗ್ಗದಿಂದ ಶಿಕಾರಿಪುರ, ನ್ಯಾಮತಿ ಸೊರಬ ಕಡೆ ಹೋಗುವ ಎಲ್ಲಾ ವಾಹನಗಳು ಆಯನೂರು ಹಾರ್ನಳ್ಳಿ ಸವಳಂಗ ಮಾರ್ಗವಾಗಿ ಚಲಿಸುವುದು. ಶಿಕಾರಿಪುರ ನ್ಯಾಮತಿ ಸೊರಬ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಎಲ್ಲಾ ವಾಹನಗಳು ಸವಳಂಗ ಹಾರ್ನಳ್ಳಿ ಆಯನೂರು ಮಾರ್ಗವಾಗಿ ಶಿವಮೊಗ್ಗಕ್ಕೆ ಬರುವುದು. ಶಿವಮೊಗ್ಗ ನಗರದಿಂದ ಅಬ್ಬಲಗೆರೆ ಕೊಮ್ಮನಾಳ್ ಕುಂಚೇನಹಳ್ಳಿ ತಾಂಡಗಳಿಗೆ ಹೋಗುವ ಎಲ್ಲಾ ವಾಹನಗಳು ರಾಗಿಗುಡ್ಡ ಕುವೆಂಪು ನಗರದ ಮುಖಾಂತರ ಚಲಿಸುವುದು. ಅಬ್ಬಲಗೆರೆ ಕೊಮ್ಮನಾಳ್ ಕುಂಚೇನಹಳ್ಳಿ ತಾಂಡಗಳಿಂದ ಶಿವಮೊಗ್ಗ ನಗರಕ್ಕೆ ಬರುವ ಎಲ್ಲಾ ವಾಹನಗಳು ಕುವೆಂಪು ನಗರ ರಾಗಿಗುಡ್ಡ ಸಂಗೊಳ್ಳಿ ರಾಯಣ್ಣ ಸರ್ಕಲ್ ಮುಖಾಂತರ ಚಲಿಸುವುದು.

ವಾಹನ ನಿಲುಗಡೆ ನಿಷೇಧವಾಗಿರುವ ಸ್ಥಳಗಳು

ಆಲ್ಕೊಳ ಸರ್ಕಲ್‍ನಿಂದ ಪೊಲೀಸ್ ಚೌಕಿ ಮಾರ್ಗವಾಗಿ ಉಷಾ ಸರ್ಕಲ್‍ವರೆಗೆ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಹೆಲಿಪ್ಯಾಡ್ ಸರ್ಕಲ್‍ನಿಂದ ಜೈಲ್ ಸರ್ಕಲ್‍ವರೆಗೆ ಹಾಗೂ ಜೈಲ್ ಸರ್ಕಲ್‍ನಿಂದ ಲಕ್ಷ್ಮೀ ಟಾಕೀಸ್‍ವರೆಗೆ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಎಂ.ಆರ್.ಎಸ್ ಸರ್ಕಲ್ ಬೈಪಾಸ್ ರಸ್ತೆ ಸಂದೇಶ್ ಮೋಟಾರ್ ಸರ್ಕಲ್‍ನಿಂದ ಅಶೋಕ ಸರ್ಕಲ್ ಮೂಲಕ ಹೆಲಿಪ್ಯಾಡ್ ಮಾರ್ಗವಾಗಿ ವಿನೋಬನಗರ ಕೆಳದಿ ಚೆನ್ನಮ್ಮ ರಸ್ತೆ ಸೈಕಲೋತ್ಸವ ಸರ್ಕಲ್‍ನಿಂದ ವಿನೋಬನಗರ ಕೆ.ಇ.ಬಿ ಆಫೀಸ್‍ವರೆಗೆ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ರಾಜ್‍ಕುಮಾರ್ ಸರ್ಕಲ್‍ನಿಂದ ಮೇದಾರಿ ಕೇರಿ ರಸ್ತೆ ಬೊಮ್ಮನಕಟ್ಟೆ ರೈಲ್ವೆ ಗೇಟ್‍ವರೆಗೆ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಪೊಲೀಸ್ ಚೌಕಿಯಿಂದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿ ಶನೇಶ್ವರ ದೇವಸ್ಥಾನ ರಸ್ತೆ ಮಾರ್ಗವಾಗಿ ಬೊಮ್ಮನಕಟ್ಟೆ ರೈಲ್ವೆ ಗೇಟ್‍ಗೆ ಹೋಗುವ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸಲಿರುವ ವಾಹನಗಳ ಮಾರ್ಗ ಮತ್ತು ಪಾರ್ಕಿಂಗ್ ವ್ಯವಸ್ಥೆ

ತೀರ್ಥಹಳ್ಳಿ ಭಾಗದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ನ್ಯೂಮಂಡ್ಲಿ ಎಡಕ್ಕೆ ತಿರುಗಿ ಗೋಪಾಳ ಸರ್ಕಲ್ ಆಲ್ಕೊಳ ಸರ್ಕಲ್ ಬಲಕ್ಕೆ ತಿರುಗಿ ಎ.ಪಿ.ಎಂ.ಸಿ ಒಳಭಾಗಕ್ಕೆ ಬಂದು ಸಾರ್ವಜನಿಕರನ್ನು ಇಳಿಸಿದ ನಂತರ ಪಾರ್ಕಿಂಗ್ ಸ್ಥಳ ಗುರುತಿಸಿದ ಎ.ಪಿ.ಎಂ.ಸಿ ಒಳಭಾಗದಲ್ಲಿ ಪಾರ್ಕಿಂಗ್ ಮಾಡುವುದು. ಸಾಗರ, ಹೊಸನಗರ ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಆಲ್ಕೊಳ ಸರ್ಕಲ್ ಸಾಗರ ರಸ್ತೆ ಆಲ್ಕೊಳ ಸರ್ಕಲ್ ಪೊಲೀಸ್ ಚೌಕಿಗೆ ಬಂದು ಸಾರ್ವಜನಿಕರನ್ನು ಇಳಿಸಿದ ನಂತರ ಪಾರ್ಕಿಂಗ್ ಸ್ಥಳ ಗುರುತಿಸಿದ ಎ.ಪಿ.ಎಂ.ಸಿ ಮತ್ತು ಸೋಮಿನಕೊಪ್ಪ ಆದರ್ಶನಗರ ಲೇಔಟ್‍ನಲ್ಲಿ ಪಾರ್ಕಿಂಗ್ ಮಾಡುವುದು. ಶಿಕಾರಿಪುರ, ಶಿರಾಳಕೊಪ್ಪ, ಆನವಟ್ಟಿ ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಬಸವನಗಂಗೂರು ಬೊಮ್ಮನಕಟ್ಟೆ ಮಾರ್ಗವಾಗಿ ಬೊಮ್ಮನಕಟ್ಟೆಗೆ ಬಂದು ಸಾರ್ವಜನಿಕರನ್ನು ಇಳಿಸಿದ ನಂತರ ಪಾರ್ಕಿಂಗ್ ಸ್ಥಳ ಗುರುತಿಸಿದ ಬೊಮ್ಮನಕಟ್ಟೆ ಎಸ್.ಎಲ್.ಕೆ ಲೇಔಟ್‍ನಲ್ಲಿ ಪಾರ್ಕಿಂಗ್ ಮಾಡುವುದು.

ಹೊನ್ನಾಳಿ, ಹರಿಹರ, ದಾವಣಗೆರೆ, ಹಾವೇರಿ ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಸವಳಂಗ ಬಸವನಗಂಗೂರು ಬೊಮ್ಮನಕಟ್ಟೆ ಮಾರ್ಗವಾಗಿ ಬೊಮ್ಮನಕಟ್ಟೆಗೆ ಬಂದು ಸಾರ್ವಜನಿಕರನ್ನು ಇಳಿಸಿದ ನಂತರ ಪಾರ್ಕಿಂಗ್ ಸ್ಥಳ ಗುರುತಿಸಿದ ಬೊಮ್ಮನಕಟ್ಟೆ ಎಸ್.ಎಲ್.ಕೆ ಲೇಔಟ್‍ನಲ್ಲಿ ಪಾರ್ಕಿಂಗ್ ಮಾಡುವುದು. ಭದ್ರಾವತಿ, ಚಿಕ್ಕಮಗಳೂರು, ಎನ್,ಆರ್.ಪುರ ಕೊಪ್ಪ ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಎಂ.ಆರ್.ಎಸ್ ಸರ್ಕಲ್ ಬೈಪಾಸ್ ರಸ್ತೆ ಸಂದೇಶ್ ಮೋಟರ್ಸ್ ಸರ್ಕಲ್ ನ್ಯೂಮಂಡ್ಲಿ ಸರ್ಕಲ್ ಗೋಪಾಳ ಸರ್ಕಲ್ ಆಲ್ಕೊಳ ಸರ್ಕಲ್ ಬಲಕ್ಕೆ ಎ.ಪಿ.ಎಂ.ಸಿ ಒಳಭಾಗಕ್ಕೆ ಬಂದು ಸಾರ್ವಜನಿಕರನ್ನು ಇಳಿಸಿದ ನಂತರ ಪಾರ್ಕಿಂಗ್ ಸ್ಥಳ ಗುರುತಿಸಿದ ಎ.ಪಿ.ಎಂ.ಸಿ ಒಳಭಾಗದಲ್ಲಿ ಪಾರ್ಕಿಂಗ್ ಮಾಡುವುದು. ಹೊಳೆಹೊನ್ನೂರು, ಚನ್ನಗಿರಿ, ಚಿತ್ರದುರ್ಗದ ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಹೊಳೆಹೊನ್ನೂರು ಸರ್ಕಲ್ ಶಂಕರಮಠ ಸರ್ಕಲ್ ಕೆ.ಇ.ಬಿ ಸರ್ಕಲ್ ರೈಲ್ವೆ ನಿಲ್ದಾಣದ ರಸ್ತೆ ಉಷಾ ಸರ್ಕಲ್‍ಗೆ ಬಂದು ಸಾರ್ವಜನಿಕರನ್ನು ಇಳಿಸಿದ ನಂತರ ಪಾರ್ಕಿಂಗ್ ಸ್ಥಳ ಗುರುತಿಸಿದ ನೆಹರು ಕ್ರೀಡಾಂಗಣ ಕುವೆಂಪು ರಂಗಮಂದಿರ ಎನ್.ಇ.ಎಸ್ ಮೈದಾನ ಶೇಷಾದ್ರಿಪುರಂ ಗೂಡ್ಸ್ ಶೇಡ್ ಸೈನ್ಸ್ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು.

ಈ ಎಲ್ಲಾ ಮಾಗ್ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು ಆಂಬುಲೆನ್ಸ್ ಹಾಗೂ ಮೂಲಭೂತ ಸವಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಗೆಲ್ಲಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ

ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಿಂದ ‘ವಿರಾಟ್ ಕೊಹ್ಲಿ’ ಔಟ್

Share. Facebook Twitter LinkedIn WhatsApp Email

Related Posts

BREAKING: ರಾಜ್ಯದ ಪೊಲೀಸರ ‘ಹೆಚ್ಚುವರಿ ರಜೆ’ ರದ್ದು: ಗೃಹ ಸಚಿವ ಜಿ.ಪರಮೇಶ್ವರ್‌

10/05/2025 10:50 AM1 Min Read

ಕರ್ನಾಟಕ ರಾಜ್ಯ ಸಚಿವ ಸಂಪುಟದ ನಿರ್ಣಯಗಳು ಹೀಗಿವೆ

10/05/2025 10:39 AM10 Mins Read

ಸೂಪರ್ ಸ್ಪೆಷಾಲಿಟಿ ವೈದ್ಯರುಗಳ ವಯೋನಿವೃತ್ತಿ ಹೆಚ್ಚಳ

10/05/2025 10:33 AM1 Min Read
Recent News

BREAKING: ರಾಜ್ಯದ ಪೊಲೀಸರ ‘ಹೆಚ್ಚುವರಿ ರಜೆ’ ರದ್ದು: ಗೃಹ ಸಚಿವ ಜಿ.ಪರಮೇಶ್ವರ್‌

10/05/2025 10:50 AM

BREAKING: ಜೈಶಂಕರ್, NSA ದೋವಲ್ ಭೇಟಿ ಮಾಡಿದ ಪ್ರಧಾನಿ ಮೋದಿ | India -Pak war

10/05/2025 10:47 AM

ಕರ್ನಾಟಕ ರಾಜ್ಯ ಸಚಿವ ಸಂಪುಟದ ನಿರ್ಣಯಗಳು ಹೀಗಿವೆ

10/05/2025 10:39 AM

ಸೂಪರ್ ಸ್ಪೆಷಾಲಿಟಿ ವೈದ್ಯರುಗಳ ವಯೋನಿವೃತ್ತಿ ಹೆಚ್ಚಳ

10/05/2025 10:33 AM
State News
KARNATAKA

BREAKING: ರಾಜ್ಯದ ಪೊಲೀಸರ ‘ಹೆಚ್ಚುವರಿ ರಜೆ’ ರದ್ದು: ಗೃಹ ಸಚಿವ ಜಿ.ಪರಮೇಶ್ವರ್‌

By kannadanewsnow0710/05/2025 10:50 AM KARNATAKA 1 Min Read

* ಅವಿನಾಶ್‌ ಆರ್‌ ಭೀಮಸಂದ್ರ ಬೆಂಗಳೂರು: ಭಾರತ ಮತ್ತು ಪಾಕ್‌ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕರ್ನಾಟಕದಲ್ಲಿ…

ಕರ್ನಾಟಕ ರಾಜ್ಯ ಸಚಿವ ಸಂಪುಟದ ನಿರ್ಣಯಗಳು ಹೀಗಿವೆ

10/05/2025 10:39 AM

ಸೂಪರ್ ಸ್ಪೆಷಾಲಿಟಿ ವೈದ್ಯರುಗಳ ವಯೋನಿವೃತ್ತಿ ಹೆಚ್ಚಳ

10/05/2025 10:33 AM

ಈ ದಿಕ್ಕಿನಲ್ಲಿ ಕುಳಿತು ಹನುಮಾನ್ ಚಾಲೀಸಾ ಓದಿದರೆ ದರಿದ್ರತೆಯ ಅಂತ್ಯ ಆಗುತ್ತದೆ

10/05/2025 10:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.