ಬೆಂಗಳೂರು : ನಿನ್ನೆ ಬೆಳಿಗ್ಗೆ ಕನ್ನಡದ ಹಿರಿಯ ನಟ ನಿರ್ಮಾಪಕ ಹಾಗೂ ನಿರ್ದೇಶಕರಾದಂತಹ ದ್ವಾರಕೀಶ್ ಅವರು ಹೃದಯಘಾತದಿಂದ ತಮ್ಮ ನಿವಾಸದಲ್ಲಿ ಸಾವನಪ್ಪಿದ್ದರು ಇಂದು ಅವರ ಪಾರ್ಥಿವ ಶರೀರವನ್ನು ಗಣ್ಯರಿಗೆ ಹಾಗೂ ಚಿತ್ರ ಕಲಾವಿದರಿಗೆ ಸಾರ್ವಜನಿಕರ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿತ್ತು ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆಗಮಿಸಿ ಅವರ ಅಂತಿಮ ದರ್ಶನ ಪಡೆದುಕೊಂಡರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕನ್ನಡ ಚಿತ್ರರಂಗಕ್ಕೆ ನಟ ದ್ವಾರಕೀಶ್ ಅವರ ಸೇವೆ ಬಹಳ ಅಪಾರವಾದದ್ದು,ಕನ್ನಡ ಚಿತ್ರರಂಗದಲ್ಲಿ ನಟ ದ್ವಾರಕೀಶ್ ಅವರದ್ದೇ ಆದಂತ ಛಾಪು ಹೊಂದಿದ್ದರು. ನಟರಾಗಿ ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿ ಕನ್ನಡ ಚಿತ್ರರಂಗದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ.
ಡಾಕ್ಟರ್ ರಾಜಕುಮಾರ್, ಅಂಬರೀಶ್, ವಿಷ್ಣುವರ್ಧನ್ ಜೊತೆ ಅವರು ನಟನೆ ಮಾಡಿದ್ದಾರೆ. ನಾನು ದ್ವಾರಕೀಶ್ ಹೆಲಿಕ್ಯಾಪ್ಟರ್ ನಲ್ಲಿ ಮೈಸೂರಿಗೆ ಹೋಗಿದ್ದೆವು. ದ್ವಾರಕೀಶ್ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.