Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

ಮನೆಯಲ್ಲಿ ಇದ್ದಕ್ಕಿದ್ದಂತೆ ‘ಹಲ್ಲಿ’ಗಳು ಹೆಚ್ಚಾಗಿವ್ಯಾ.? ಇದರ ಸಂಕೇತವಾಗಿರ್ಬೋದು.!

04/07/2025 8:29 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲಿಂಗತ್ವ ಅಲ್ಪಸಂಖ್ಯಾತರೊಬ್ಬರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ : ಯೂಟ್ಯೂಬರ್‌ಗೆ 50 ಲಕ್ಷ ರೂ. ದಂಡ
Uncategorized

ಲಿಂಗತ್ವ ಅಲ್ಪಸಂಖ್ಯಾತರೊಬ್ಬರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ : ಯೂಟ್ಯೂಬರ್‌ಗೆ 50 ಲಕ್ಷ ರೂ. ದಂಡ

By KNN IT Team14/01/2024 7:57 PM

ಲಿಂಗತ್ವ ಅಲ್ಪಸಂಖ್ಯಾತರೊಬ್ಬರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ ಪ್ರಕಟಿಸಿದ ಯೂಟ್ಯೂಬರ್‌ ಒಬ್ಬರಿಗೆ ಮದ್ರಾಸ್ ಹೈಕೋರ್ಟ್ 50 ಲಕ್ಷ ರೂ. ದಂಡ ವಿಧಿಸಿದೆ. ಯೂಟ್ಯೂಬರ್ ಜಿಯೋ ಮೈಕಲ್ ಎಂಬಾತ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಕಾರ್ಯಕರ್ತೆಯೂ ಆಗಿರುವ ಲಿಂಗತ್ವ ಅಲ್ಪಸಂಖ್ಯಾತರಾದ ಅಪ್ಸರಾ ರೆಡ್ಡಿ ವಿರುದ್ಧ ಆಕ್ಷೇಪಾರ್ಹ ವಿಡಿಯೋಗಳನ್ನು ಪೋಸ್ಟ್‌ ಮಾಡಿದ್ದಕ್ಕಾಗಿ ನ್ಯಾಯಮೂರ್ತಿ ಎನ್‌ ಸತೀಶ್ ಕುಮಾರ್ ನೇತೃತ್ವದ ಏಕ ಸದಸ್ಯ ಪೀಠ ದಂಡ ವಿಧಿಸಿ ತೀರ್ಪು ನೀಡಿದೆ.

ಅಪ್ಸರಾ ರೆಡ್ಡಿ ಅವರು ಸೆಲೆಬ್ರಿಟಿ ಭಾಷಣಕಾರರು, ಪತ್ರಕರ್ತೆ ಹಾಗೂ ಎಐಎಡಿಎಂಕೆ ವಕ್ತಾರರು ಆಗಿದ್ದಾರೆ. ಯೂಟ್ಯೂಬರ್‌ ಜಿಯೋ ಮೈಕಲ್ ಪದೇಪದೆ ತಮ್ಮ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಪ್ರಕಟಿಸುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ಕಳೆದ ವಾರದಲ್ಲಿ ಈ ತೀರ್ಪು ಪ್ರಕಟವಾಗಿದ್ದು, ಸ್ವತಃ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎನ್ ಸತೀಶ್ ಕುಮಾರ್ ಅವರು ಅಪ್ಸರಾ ವಿರುದ್ಧ ಯೂಟ್ಯೂಬ್‌ನಲ್ಲಿ ಪ್ರಕಟವಾಗಿರುವ ಹಲವು ವಿಡಿಯೋಗಳು ಹಾಗೂ ಪೋಸ್ಟ್‌ಗಳನ್ನು ವೀಕ್ಷಿಸಿ ಆಕ್ಷೇಪಾರ್ಹ ಸಂಗತಿಗಳಿರುವುದನ್ನು ಗಮನಿಸಿದರು. ಅಲ್ಲದೆ ಆರೋಪಿಯು ಸತ್ಯವನ್ನು ಪರಿಶೀಲನೆಗೊಳಪಡಿಸದೆ ಯುಟ್ಯೂಬ್‌ನಲ್ಲಿ ಪೋಸ್ಟ್‌ ಮಾಡಿರುವುದನ್ನು ಕಂಡುಕೊಂಡರು. “ಆಕ್ಷೇಪಾರ್ಹ ವಿಡಿಯೋಗಳು ಅರ್ಜಿದಾರರನ್ನು ದುರುದ್ದೇಶಪೂರ್ವಕ ಹಾಗೂ ಮಾನಹಾನಿಗೊಳಿಸುವುದನ್ನು ಬಿಟ್ಟರೆ ಬೇರೆ ಯಾವುದೇ ವಿಷಯವಿಲ್ಲ. ಪೋಸ್ಟ್ ಪ್ರಕಟ ಮಾಡುವ ಸಂದರ್ಭದಲ್ಲಿ ಆರೋಪಿ ಇತತರ ಖಾಸಗಿ ಜೀವನದಲ್ಲಿ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ. ಪ್ರಕಟ ಮಾಡುವುದು ಒಂದು ಹಕ್ಕು ಆದರೂ, ಕೆಲವೊಂದು ವಿಷಯಗಳಲ್ಲಿ ನಿರ್ಬಂಧಗಳು ಒಳಗೊಂಡಿರುತ್ತವೆ. ಅಲ್ಲದೆ ಖಾಸಗಿ ವಿಚಾರದಲ್ಲಿ ತನ್ನ ಗಡಿಯನ್ನು ದಾಟಬಾರದು. ನಿರ್ದಿಷ್ಟವಾಗಿ ಯೂಟ್ಯೂಬ್‌ನಂಥ ಸಾಮಾಜಿಕ ಮಾಧ್ಯಮಗಳಲ್ಲಿ ನಡವಳಿಕೆ, ವರ್ತನೆ ಹಾಗೂ ಖಾಸಗಿ ವಿಚಾರಗಳಂಥ ಇಂತಹ ವಿಷಯಗಳು ಕಾಣಿಸಿಕೊಂಡಾಗ ನಿರ್ದಿಷ್ಟ ಸಮುದಾಯದ ಮೇಲೆ ಗಂಭೀರ ಪರಿಣಾಮ ಉಂಟು ಮಾಡುತ್ತದೆ. ಆದ ಕಾರಣ ಇದು ಮಾನಹಾನಿಯೆಂದು ಕೋರ್ಟ್ ಪರಿಗಣಿಸಿದ್ದು, ಮಾನನಷ್ಟವನ್ನು ತುಂಬಿಕೊಡುವ ಸಲುವಾಗಿ ಆರೋಪಿಗೆ ದಂಡ ವಿಧಿಸಿದೆ” ಎಂದು ನ್ಯಾಯಾಧೀಶರು ತಿಳಿಸಿದರು. ಸಮಾಜದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯ ಎದುರಿಸುತ್ತಿರುವ ತೊಂದರೆಗಳು ಮತ್ತು ಕಷ್ಟಗಳನ್ನು ಪ್ರಸ್ತಾಪಿಸಿದ ನ್ಯಾಯಮೂರ್ತಿಗಳು ಇಂತಹ ಘಟನೆಗಳು ಮತ್ತೆ ಮರುಕಳುಸದಂತೆ ಸೂಚಿಸಿದರು. ಅಲ್ಲದೇ ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳಿಗೆ ಧಕ್ಕೆಯಾಗದಂತೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಗೌರವಯುತವಾದ ಪೋಸ್ಟ್ ಮಾಡುವಂತೆ, ತನ್ನ ಬಳಕೆದಾರರಿಗೆ ನಿರ್ದೇಶನ ನೀಡುವಂತೆ ಹಾಗೂ ಮಾರ್ಗದರ್ಶನ ಮಾಡುವಂತೆ ಗೂಗಲ್ ಮತ್ತು ಯೂಟ್ಯೂಬ್‌ಗೆ ಸಹ ನಿರ್ದೇಶನ ನೀಡಿದೆ. ಅಪ್ಸರಾ ಅವರು 1.25 ಕೋಟಿ ರೂ. ಪರಿಹಾರಕ್ಕಾಗಿ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು. ಆದರೆ ಕೋರ್ಟ್ ವಾದವಿವಾದಗಳನ್ನು ಪರಿಗಣಿಸಿ 50 ಲಕ್ಷ ರೂ. ದಂಡ ವಿಧಿಸಿತು. ಅಲ್ಲದೆ ಪ್ರಕಟಿಸಲಾಗಿದ್ದ ಎಲ್ಲ ಪೋಸ್ಟ್‌ಗಳನ್ನು ಅಳಿಸಿಹಾಕುವಂತೆ ಆದೇಶಿಸಿದೆ.

Share. Facebook Twitter LinkedIn WhatsApp Email

Related Posts

ಹಸಿರುಮಕ್ಕಿ ಸೇತುವೆ ಬೇಗ ಆಗಬಾರದೆಂದು ಬಿವೈ ರಾಘವೇಂದ್ರ, ಹಾಲಪ್ಪ ತಡೆ: ಶಾಸಕ ಗೋಪಾಲಕೃಷ್ಣ ಬೇಳೂರು ಕಿಡಿ

04/07/2025 3:41 PM1 Min Read

‘ಕ್ಯಾಪ್ಟನ್ ಕೂಲ್’ ಐಕಾನಿಕ್ ಹೆಸರಿನ ‘ಟ್ರೇಡ್ ಮಾರ್ಕ್’ಗಾಗಿ ‘ಎಂ.ಎಸ್ ಧೋನಿ’ ಅರ್ಜಿ

30/06/2025 5:47 PM1 Min Read

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read
Recent News

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

ಮನೆಯಲ್ಲಿ ಇದ್ದಕ್ಕಿದ್ದಂತೆ ‘ಹಲ್ಲಿ’ಗಳು ಹೆಚ್ಚಾಗಿವ್ಯಾ.? ಇದರ ಸಂಕೇತವಾಗಿರ್ಬೋದು.!

04/07/2025 8:29 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM
State News
KARNATAKA

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

By kannadanewsnow0904/07/2025 8:44 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕಳೆದ ಕೆಲ ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದ್ದು, ನಾಳೆಯೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ…

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM

BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್

04/07/2025 8:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.